AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ: ಮಾ.10ರಂದು ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ

ಭದ್ರಾವತಿ ಶಾಸಕ ಸಂಗಮೇಶ್​ಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್​ ಇದೀಗ MLA​ಗೆ ಬೆಂಬಲವಾಗಿ ನಿಲ್ಲಲು ನಿರ್ಧಾರ ಮಾಡಿದೆ. ಈ ಕುರಿತು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ: ಮಾ.10ರಂದು ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ
ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ
KUSHAL V
|

Updated on: Mar 08, 2021 | 11:54 PM

Share

ಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್​ಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್​ ಇದೀಗ MLA​ಗೆ ಬೆಂಬಲವಾಗಿ ನಿಲ್ಲಲು ನಿರ್ಧಾರ ಮಾಡಿದೆ. ಈ ಕುರಿತು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಿಎಲ್​ಪಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಸದನದ ಹೊರಗೆ ಸಂಗಮೇಶ್​ ಬೆನ್ನಿಗೆ ನಿಲ್ಲುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸಿದ್ದರಾಮಯ್ಯ ಮನವಿ ಮಾಡಿದರು. ಹಾಗಾಗಿ, ಮಾ.10ರಂದು ಭದ್ರಾವತಿಯಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ ಮಾಡಲಾಯಿತು.

ಎರಡು ಪಟ್ಟಣ ಪಂಚಾಯಿತಿ, 27 ವಾರ್ಡ್‌ಗಳಿಗೆ ಚುನಾವಣೆ ಘೋಷಣೆ ಇತ್ತ, ಎರಡು ಪಟ್ಟಣ ಪಂಚಾಯಿತಿ, 27 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಅಂತೆಯೇ, ಮಾರ್ಚ್‌ 29ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಮಾರ್ಚ್ 17 ಕೊನೆಯ ದಿನವಾಗಿದ್ದು ಮಾರ್ಚ್ 31ರಂದು ಮತ ಎಣಿಕೆ ನಡೆಯಲಿದೆ. ಮೈಸೂರು ಜಿಲ್ಲೆಯ ಸರಗೂರು ಪಟ್ಟಣ ಪಂಚಾಯಿತಿ ಹಾಗೂ ತುಮಕೂರು ಜಿಲ್ಲೆಯ ಹುಳಿಯಾರು ಪ.ಪಂ.ಗೆ ಚುನಾವಣೆ ನಡೆಯಲಿದೆ. ಇದಲ್ಲದೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ 27 ವಾರ್ಡ್‌ಗಳಿಗೆ ಚುನಾವಣೆ ಸಹ ನಡೆಯಲಿದೆ.

ವಿವಿಧ ಕಾರಣಗಳಿಂದ ರಾಜ್ಯಾದ್ಯಂತ ತೆರವಾಗಿದ್ದ 27 ವಾರ್ಡ್ ಮತ್ತು ಅವಧಿ ಮುಕ್ತಾಯಗೊಂಡಿರುವ ಗ್ರಾ.ಪಂ.ಗಳಿಗೂ ಚುನಾವಣೆ ನಡೆಯಲಿದೆ. 19 ಜಿಲ್ಲೆಗಳಲ್ಲಿ ಅವಧಿ ಮುಕ್ತಾಯಗೊಂಡಿರುವ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ‘ಬೆಳಗಾವಿ ಬೈ ಎಲೆಕ್ಷನ್​ ಟೈಂಗೆ ರಮೇಶ್​ ಅಥವಾ ಬಾಲಚಂದ್ರ ಜಾರಕಿಹೊಳಿ ಸಚಿವರಾಗಿರಬೇಕು’

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​