AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ: ಮಾ.10ರಂದು ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ

ಭದ್ರಾವತಿ ಶಾಸಕ ಸಂಗಮೇಶ್​ಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್​ ಇದೀಗ MLA​ಗೆ ಬೆಂಬಲವಾಗಿ ನಿಲ್ಲಲು ನಿರ್ಧಾರ ಮಾಡಿದೆ. ಈ ಕುರಿತು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ: ಮಾ.10ರಂದು ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ
ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ
KUSHAL V
|

Updated on: Mar 08, 2021 | 11:54 PM

Share

ಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್​ಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್​ ಇದೀಗ MLA​ಗೆ ಬೆಂಬಲವಾಗಿ ನಿಲ್ಲಲು ನಿರ್ಧಾರ ಮಾಡಿದೆ. ಈ ಕುರಿತು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಿಎಲ್​ಪಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಸದನದ ಹೊರಗೆ ಸಂಗಮೇಶ್​ ಬೆನ್ನಿಗೆ ನಿಲ್ಲುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸಿದ್ದರಾಮಯ್ಯ ಮನವಿ ಮಾಡಿದರು. ಹಾಗಾಗಿ, ಮಾ.10ರಂದು ಭದ್ರಾವತಿಯಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ ಮಾಡಲಾಯಿತು.

ಎರಡು ಪಟ್ಟಣ ಪಂಚಾಯಿತಿ, 27 ವಾರ್ಡ್‌ಗಳಿಗೆ ಚುನಾವಣೆ ಘೋಷಣೆ ಇತ್ತ, ಎರಡು ಪಟ್ಟಣ ಪಂಚಾಯಿತಿ, 27 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಅಂತೆಯೇ, ಮಾರ್ಚ್‌ 29ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಮಾರ್ಚ್ 17 ಕೊನೆಯ ದಿನವಾಗಿದ್ದು ಮಾರ್ಚ್ 31ರಂದು ಮತ ಎಣಿಕೆ ನಡೆಯಲಿದೆ. ಮೈಸೂರು ಜಿಲ್ಲೆಯ ಸರಗೂರು ಪಟ್ಟಣ ಪಂಚಾಯಿತಿ ಹಾಗೂ ತುಮಕೂರು ಜಿಲ್ಲೆಯ ಹುಳಿಯಾರು ಪ.ಪಂ.ಗೆ ಚುನಾವಣೆ ನಡೆಯಲಿದೆ. ಇದಲ್ಲದೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ 27 ವಾರ್ಡ್‌ಗಳಿಗೆ ಚುನಾವಣೆ ಸಹ ನಡೆಯಲಿದೆ.

ವಿವಿಧ ಕಾರಣಗಳಿಂದ ರಾಜ್ಯಾದ್ಯಂತ ತೆರವಾಗಿದ್ದ 27 ವಾರ್ಡ್ ಮತ್ತು ಅವಧಿ ಮುಕ್ತಾಯಗೊಂಡಿರುವ ಗ್ರಾ.ಪಂ.ಗಳಿಗೂ ಚುನಾವಣೆ ನಡೆಯಲಿದೆ. 19 ಜಿಲ್ಲೆಗಳಲ್ಲಿ ಅವಧಿ ಮುಕ್ತಾಯಗೊಂಡಿರುವ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ‘ಬೆಳಗಾವಿ ಬೈ ಎಲೆಕ್ಷನ್​ ಟೈಂಗೆ ರಮೇಶ್​ ಅಥವಾ ಬಾಲಚಂದ್ರ ಜಾರಕಿಹೊಳಿ ಸಚಿವರಾಗಿರಬೇಕು’

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?