AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ: ಮಾ.10ರಂದು ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ

ಭದ್ರಾವತಿ ಶಾಸಕ ಸಂಗಮೇಶ್​ಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್​ ಇದೀಗ MLA​ಗೆ ಬೆಂಬಲವಾಗಿ ನಿಲ್ಲಲು ನಿರ್ಧಾರ ಮಾಡಿದೆ. ಈ ಕುರಿತು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ: ಮಾ.10ರಂದು ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ
ಶಾಸಕ ಸಂಗಮೇಶ್ ಬೆನ್ನಿಗೆ ನಿಂತ ‘ಕೈ’ ಪಡೆ
KUSHAL V
|

Updated on: Mar 08, 2021 | 11:54 PM

Share

ಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್​ಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್​ ಇದೀಗ MLA​ಗೆ ಬೆಂಬಲವಾಗಿ ನಿಲ್ಲಲು ನಿರ್ಧಾರ ಮಾಡಿದೆ. ಈ ಕುರಿತು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಿಎಲ್​ಪಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಸದನದ ಹೊರಗೆ ಸಂಗಮೇಶ್​ ಬೆನ್ನಿಗೆ ನಿಲ್ಲುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸಿದ್ದರಾಮಯ್ಯ ಮನವಿ ಮಾಡಿದರು. ಹಾಗಾಗಿ, ಮಾ.10ರಂದು ಭದ್ರಾವತಿಯಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಧರಣಿ ನಡೆಸಲು ನಿರ್ಧಾರ ಮಾಡಲಾಯಿತು.

ಎರಡು ಪಟ್ಟಣ ಪಂಚಾಯಿತಿ, 27 ವಾರ್ಡ್‌ಗಳಿಗೆ ಚುನಾವಣೆ ಘೋಷಣೆ ಇತ್ತ, ಎರಡು ಪಟ್ಟಣ ಪಂಚಾಯಿತಿ, 27 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಅಂತೆಯೇ, ಮಾರ್ಚ್‌ 29ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಮಾರ್ಚ್ 17 ಕೊನೆಯ ದಿನವಾಗಿದ್ದು ಮಾರ್ಚ್ 31ರಂದು ಮತ ಎಣಿಕೆ ನಡೆಯಲಿದೆ. ಮೈಸೂರು ಜಿಲ್ಲೆಯ ಸರಗೂರು ಪಟ್ಟಣ ಪಂಚಾಯಿತಿ ಹಾಗೂ ತುಮಕೂರು ಜಿಲ್ಲೆಯ ಹುಳಿಯಾರು ಪ.ಪಂ.ಗೆ ಚುನಾವಣೆ ನಡೆಯಲಿದೆ. ಇದಲ್ಲದೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ 27 ವಾರ್ಡ್‌ಗಳಿಗೆ ಚುನಾವಣೆ ಸಹ ನಡೆಯಲಿದೆ.

ವಿವಿಧ ಕಾರಣಗಳಿಂದ ರಾಜ್ಯಾದ್ಯಂತ ತೆರವಾಗಿದ್ದ 27 ವಾರ್ಡ್ ಮತ್ತು ಅವಧಿ ಮುಕ್ತಾಯಗೊಂಡಿರುವ ಗ್ರಾ.ಪಂ.ಗಳಿಗೂ ಚುನಾವಣೆ ನಡೆಯಲಿದೆ. 19 ಜಿಲ್ಲೆಗಳಲ್ಲಿ ಅವಧಿ ಮುಕ್ತಾಯಗೊಂಡಿರುವ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ‘ಬೆಳಗಾವಿ ಬೈ ಎಲೆಕ್ಷನ್​ ಟೈಂಗೆ ರಮೇಶ್​ ಅಥವಾ ಬಾಲಚಂದ್ರ ಜಾರಕಿಹೊಳಿ ಸಚಿವರಾಗಿರಬೇಕು’

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ