AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲೂ ಇಂತಹ ಪ್ರತಿಭಟನೆ ಬೇಕಿತ್ತಾ ಕಾಂಗ್ರೆಸ್ ಅಧ್ಯಕ್ಷರೇ?

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಿಂದ‌ ಸೈಕಲ್ ಏರಿ ಇನ್​ಫ್ಯಾಂಟ್ರಿ ರಸ್ತೆಯಲ್ಲಿರುವ ಐಟಿ ಕಚೇರಿಯತ್ತ ‘ಕೈ’ ನಾಯಕರ ಪ್ರತಿಭಟನಾ ಮೆರವಣಿಗೆ ನಡೆದಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ಕೈಗೊಂಡಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಮ್ಮ ತಮ್ಮ ನಿವಾಸದಿಂದ ಸೈಕಲ್​ನಲ್ಲಿ ತೆರಳಿದ್ರು. ಸಿದ್ದರಾಮಯ್ಯಗೆ KPCC ಕಾಱಧ್ಯಕ್ಷ ಈಶ್ವರ ಖಂಡ್ರೆ, ಜಮೀರ್ ಅಹ್ಮದ್​ ಖಾನ್, ಚಲುವರಾಯಸ್ವಾಮಿ ಸಾಥ್ ನೀಡಿದ್ರು. ಆದ್ರೆ […]

ಕೊರೊನಾ ಕಾಲದಲ್ಲೂ ಇಂತಹ ಪ್ರತಿಭಟನೆ ಬೇಕಿತ್ತಾ ಕಾಂಗ್ರೆಸ್ ಅಧ್ಯಕ್ಷರೇ?
ಆಯೇಷಾ ಬಾನು
| Edited By: |

Updated on:Jun 29, 2020 | 1:38 PM

Share

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಿಂದ‌ ಸೈಕಲ್ ಏರಿ ಇನ್​ಫ್ಯಾಂಟ್ರಿ ರಸ್ತೆಯಲ್ಲಿರುವ ಐಟಿ ಕಚೇರಿಯತ್ತ ‘ಕೈ’ ನಾಯಕರ ಪ್ರತಿಭಟನಾ ಮೆರವಣಿಗೆ ನಡೆದಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ಕೈಗೊಂಡಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಮ್ಮ ತಮ್ಮ ನಿವಾಸದಿಂದ ಸೈಕಲ್​ನಲ್ಲಿ ತೆರಳಿದ್ರು. ಸಿದ್ದರಾಮಯ್ಯಗೆ KPCC ಕಾಱಧ್ಯಕ್ಷ ಈಶ್ವರ ಖಂಡ್ರೆ, ಜಮೀರ್ ಅಹ್ಮದ್​ ಖಾನ್, ಚಲುವರಾಯಸ್ವಾಮಿ ಸಾಥ್ ನೀಡಿದ್ರು. ಆದ್ರೆ ಕೊರೊನಾ ತಡೆಯಲು ಸರ್ಕಾರ ಇನ್ನಿಲ್ಲದ ಸರ್ಕಸ್ ಮಾಡ್ತಿದೆ. ಕಾಂಗ್ರೆಸ್ ನಾಯಕರಿಗೆ ಮಾತ್ರ ತಮ್ಮ ಪ್ರತಿಭಟನೆನೆ ಹೆಚ್ಚಾಗಿದೆ. ಪ್ರತಿಭಟನೆತಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಮರೆಯಾಗಿದೆ. ಜನ ಜಂಗುಳಿ ನಿಯಂತ್ರಿಸುವವರು ಯಾರು ಇಲ್ಲ.

ಕಾಂಗ್ರೆಸ್ ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್ ಕಾಂಗ್ರೆಸ್ ಪ್ರತಿಭಟನೆಯಿಂದ 3 ಕಿ.ಮೀ.ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರತಿಭಟನೆಯಿಂದಾಗಿ ಕ್ವೀನ್ಸ್ ರಸ್ತೆ, ಫ್ರೇಜರ್ ಟೌನ್​ವರೆಗೆ ಫುಲ್ ಜಾಮ್ ಆಗಿದೆ. ಈ ವೇಳೆ ಆಂಬ್ಯುಲೆನ್ಸ್ ಕೂಡ ಜನ ಜಂಗುಳಿಯಲ್ಲಿ ಸಿಕ್ಕಿ ಹಾಕಿಕೊಂಡ ದೃಶ್ಯ ಕಂಡು ಬಂದಿದೆ.

ಇನ್ನು ಪ್ರತಿಭಟನೆಗೆ ಹೈ ಗ್ರೌಂಡ್ಸ್ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದರು. ಕೇವಲ 200 ಜನ ಸೇರಲು ಅನುಮತಿ ಪಡೆದಿದ್ದರು. ಆದರೆ ಇಲಾಖೆ ಷರತ್ತುಗಳನ್ನೆಲ್ಲ ಗಾಳಿಗೆ ತೂರಿ ಧರಣಿಯಲ್ಲಿ ಹೆಚ್ಚಿನ ಜನ ಭಾಗಿಯಾಗಿದ್ದಾರೆ. ವಿಪತ್ತು‌ ನಿರ್ವಹಣಾ ಕಾಯ್ದೆ 2005ರ ಅಡಿ ಕಾಂಗ್ರೆಸ್ ನಾಯಕರ ಮೇಲೆ ಪ್ರಕರಣ ದಾಖಲಿಸಬಹುದಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಇಂತಹ ಪ್ರತಿಭಟನೆ ಬೇಕಿತ್ತಾ ಎಂಬಂತಾಗಿದೆ.

Published On - 12:20 pm, Mon, 29 June 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್