AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ […]

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ
ಸಾಧು ಶ್ರೀನಾಥ್​
|

Updated on: Nov 21, 2019 | 12:15 PM

Share

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ ಘಳಿಗೆಯಲ್ಲಿ ಕೈಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೋಕಾಕ್ ಕ್ಷೇತ್ರದ ಉಸ್ತುವಾರಿಗೆ ಗುಡ್ ಬೈ ಹೇಳಿ ಅಥಣಿಗೆ ಶಿಫ್ಟ್​ ಆಗಿದ್ದಾರೆ. ಆಕ್ಚುಯಲಿ, ಕಾಂಗ್ರೆಸ್​ ಹೈಕಮಾಂಡ್ ಶಾಸಕಿ ಹೆಬ್ಬಾಳ್ಕರ್​​ಗೆ ಕ್ಷೇತ್ರದ ಲಿಂಗಾಯತ ಮತಗಳ ಒಗ್ಗೂಡಿಸುವ ಜವಾಬ್ದಾರಿಯನ್ನ ನೀಡಿತ್ತು. ಆದ್ರೆ ನಿನ್ನೆಯಿಂದ ದಿಢೀರ್ ಉಸ್ತುವಾರಿ ಕ್ಷೇತ್ರ ಬದಲು ಮಾಡಿಕೊಂಡ ಶಾಸಕಿ, ನಾಮಪತ್ರ ಸಲ್ಲಿಕೆಗೂ ಗೈರಾಗಿದ್ದರು.

ರಮೇಶ್ ಗೆದ್ದು ಬಂದ್ರೆ ರಾಜಕೀಯವಾಗಿ ತೊಂದರೆಯ ಸಾಧ್ಯತೆ: ರಮೇಶ್ ಜಾರಕಿಹೊಳಿ‌ ಗೆದ್ದು ಅಧಿಕಾರಕ್ಕೆ ಬಂದರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ತೊಂದರೆಯಾಗುವ ಸಾಧ್ಯತೆ ಎದುರಾಗುತ್ತದೆ ಎಂಬುದು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಲೋಚನೆ. ಈ ಹಿನ್ನೆಲೆ ಭಯಗೊಂಡು ಗೋಕಾಕ್ ಕ್ಷೇತ್ರಕ್ಕೆ ಒಂದು ಬಾರಿಯೂ ಕಾಲಿಡದೆ, ಯುದ್ಧಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿದ್ರಾ ಹೆಬ್ಬಾಳ್ಕರ್ ಎಂದು ಕ್ಷೇತ್ರದ ಜನ ಮಾತನಾಡಿಕೊಳ್ಳತೊಡಗಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಾರದಂತೆ ಕೆಲವು ಬಿಜೆಪಿ ನಾಯಕರು ಹೆಬ್ಬಾಳ್ಕರ್ ಮನವೊಲಿಸಿದ್ದಾರೆ. ಹಾಗಾಗಿ, ರಾಜಕೀಯ ಭವಿಷ್ಯ ದೃಷ್ಟಿಯಿಂದ ಸೈಲೆಂಟ್ ಆಗಿ ಹೆಬ್ಬಾಳ್ಕರ್ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ‌ ಗೋಕಾಕ್ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಡಿಕೆ ಶಿವಕುಮಾರ್ ಕೂಡ ಪ್ರಚಾರಕ್ಕೆ ಆಗಮಿಸಲಿದ್ದಾರೆ ಅಂದಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್