AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ […]

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 21, 2019 | 12:15 PM

Share

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ ಘಳಿಗೆಯಲ್ಲಿ ಕೈಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೋಕಾಕ್ ಕ್ಷೇತ್ರದ ಉಸ್ತುವಾರಿಗೆ ಗುಡ್ ಬೈ ಹೇಳಿ ಅಥಣಿಗೆ ಶಿಫ್ಟ್​ ಆಗಿದ್ದಾರೆ. ಆಕ್ಚುಯಲಿ, ಕಾಂಗ್ರೆಸ್​ ಹೈಕಮಾಂಡ್ ಶಾಸಕಿ ಹೆಬ್ಬಾಳ್ಕರ್​​ಗೆ ಕ್ಷೇತ್ರದ ಲಿಂಗಾಯತ ಮತಗಳ ಒಗ್ಗೂಡಿಸುವ ಜವಾಬ್ದಾರಿಯನ್ನ ನೀಡಿತ್ತು. ಆದ್ರೆ ನಿನ್ನೆಯಿಂದ ದಿಢೀರ್ ಉಸ್ತುವಾರಿ ಕ್ಷೇತ್ರ ಬದಲು ಮಾಡಿಕೊಂಡ ಶಾಸಕಿ, ನಾಮಪತ್ರ ಸಲ್ಲಿಕೆಗೂ ಗೈರಾಗಿದ್ದರು.

ರಮೇಶ್ ಗೆದ್ದು ಬಂದ್ರೆ ರಾಜಕೀಯವಾಗಿ ತೊಂದರೆಯ ಸಾಧ್ಯತೆ: ರಮೇಶ್ ಜಾರಕಿಹೊಳಿ‌ ಗೆದ್ದು ಅಧಿಕಾರಕ್ಕೆ ಬಂದರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ತೊಂದರೆಯಾಗುವ ಸಾಧ್ಯತೆ ಎದುರಾಗುತ್ತದೆ ಎಂಬುದು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಲೋಚನೆ. ಈ ಹಿನ್ನೆಲೆ ಭಯಗೊಂಡು ಗೋಕಾಕ್ ಕ್ಷೇತ್ರಕ್ಕೆ ಒಂದು ಬಾರಿಯೂ ಕಾಲಿಡದೆ, ಯುದ್ಧಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿದ್ರಾ ಹೆಬ್ಬಾಳ್ಕರ್ ಎಂದು ಕ್ಷೇತ್ರದ ಜನ ಮಾತನಾಡಿಕೊಳ್ಳತೊಡಗಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಾರದಂತೆ ಕೆಲವು ಬಿಜೆಪಿ ನಾಯಕರು ಹೆಬ್ಬಾಳ್ಕರ್ ಮನವೊಲಿಸಿದ್ದಾರೆ. ಹಾಗಾಗಿ, ರಾಜಕೀಯ ಭವಿಷ್ಯ ದೃಷ್ಟಿಯಿಂದ ಸೈಲೆಂಟ್ ಆಗಿ ಹೆಬ್ಬಾಳ್ಕರ್ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ‌ ಗೋಕಾಕ್ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಡಿಕೆ ಶಿವಕುಮಾರ್ ಕೂಡ ಪ್ರಚಾರಕ್ಕೆ ಆಗಮಿಸಲಿದ್ದಾರೆ ಅಂದಿದ್ದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ