AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ […]

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 21, 2019 | 12:15 PM

Share

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ ಘಳಿಗೆಯಲ್ಲಿ ಕೈಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೋಕಾಕ್ ಕ್ಷೇತ್ರದ ಉಸ್ತುವಾರಿಗೆ ಗುಡ್ ಬೈ ಹೇಳಿ ಅಥಣಿಗೆ ಶಿಫ್ಟ್​ ಆಗಿದ್ದಾರೆ. ಆಕ್ಚುಯಲಿ, ಕಾಂಗ್ರೆಸ್​ ಹೈಕಮಾಂಡ್ ಶಾಸಕಿ ಹೆಬ್ಬಾಳ್ಕರ್​​ಗೆ ಕ್ಷೇತ್ರದ ಲಿಂಗಾಯತ ಮತಗಳ ಒಗ್ಗೂಡಿಸುವ ಜವಾಬ್ದಾರಿಯನ್ನ ನೀಡಿತ್ತು. ಆದ್ರೆ ನಿನ್ನೆಯಿಂದ ದಿಢೀರ್ ಉಸ್ತುವಾರಿ ಕ್ಷೇತ್ರ ಬದಲು ಮಾಡಿಕೊಂಡ ಶಾಸಕಿ, ನಾಮಪತ್ರ ಸಲ್ಲಿಕೆಗೂ ಗೈರಾಗಿದ್ದರು.

ರಮೇಶ್ ಗೆದ್ದು ಬಂದ್ರೆ ರಾಜಕೀಯವಾಗಿ ತೊಂದರೆಯ ಸಾಧ್ಯತೆ: ರಮೇಶ್ ಜಾರಕಿಹೊಳಿ‌ ಗೆದ್ದು ಅಧಿಕಾರಕ್ಕೆ ಬಂದರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ತೊಂದರೆಯಾಗುವ ಸಾಧ್ಯತೆ ಎದುರಾಗುತ್ತದೆ ಎಂಬುದು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಲೋಚನೆ. ಈ ಹಿನ್ನೆಲೆ ಭಯಗೊಂಡು ಗೋಕಾಕ್ ಕ್ಷೇತ್ರಕ್ಕೆ ಒಂದು ಬಾರಿಯೂ ಕಾಲಿಡದೆ, ಯುದ್ಧಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿದ್ರಾ ಹೆಬ್ಬಾಳ್ಕರ್ ಎಂದು ಕ್ಷೇತ್ರದ ಜನ ಮಾತನಾಡಿಕೊಳ್ಳತೊಡಗಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಾರದಂತೆ ಕೆಲವು ಬಿಜೆಪಿ ನಾಯಕರು ಹೆಬ್ಬಾಳ್ಕರ್ ಮನವೊಲಿಸಿದ್ದಾರೆ. ಹಾಗಾಗಿ, ರಾಜಕೀಯ ಭವಿಷ್ಯ ದೃಷ್ಟಿಯಿಂದ ಸೈಲೆಂಟ್ ಆಗಿ ಹೆಬ್ಬಾಳ್ಕರ್ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ‌ ಗೋಕಾಕ್ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಡಿಕೆ ಶಿವಕುಮಾರ್ ಕೂಡ ಪ್ರಚಾರಕ್ಕೆ ಆಗಮಿಸಲಿದ್ದಾರೆ ಅಂದಿದ್ದರು.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ