AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ […]

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ
ಸಾಧು ಶ್ರೀನಾಥ್​
|

Updated on: Nov 21, 2019 | 12:15 PM

Share

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ ಘಳಿಗೆಯಲ್ಲಿ ಕೈಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೋಕಾಕ್ ಕ್ಷೇತ್ರದ ಉಸ್ತುವಾರಿಗೆ ಗುಡ್ ಬೈ ಹೇಳಿ ಅಥಣಿಗೆ ಶಿಫ್ಟ್​ ಆಗಿದ್ದಾರೆ. ಆಕ್ಚುಯಲಿ, ಕಾಂಗ್ರೆಸ್​ ಹೈಕಮಾಂಡ್ ಶಾಸಕಿ ಹೆಬ್ಬಾಳ್ಕರ್​​ಗೆ ಕ್ಷೇತ್ರದ ಲಿಂಗಾಯತ ಮತಗಳ ಒಗ್ಗೂಡಿಸುವ ಜವಾಬ್ದಾರಿಯನ್ನ ನೀಡಿತ್ತು. ಆದ್ರೆ ನಿನ್ನೆಯಿಂದ ದಿಢೀರ್ ಉಸ್ತುವಾರಿ ಕ್ಷೇತ್ರ ಬದಲು ಮಾಡಿಕೊಂಡ ಶಾಸಕಿ, ನಾಮಪತ್ರ ಸಲ್ಲಿಕೆಗೂ ಗೈರಾಗಿದ್ದರು.

ರಮೇಶ್ ಗೆದ್ದು ಬಂದ್ರೆ ರಾಜಕೀಯವಾಗಿ ತೊಂದರೆಯ ಸಾಧ್ಯತೆ: ರಮೇಶ್ ಜಾರಕಿಹೊಳಿ‌ ಗೆದ್ದು ಅಧಿಕಾರಕ್ಕೆ ಬಂದರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ತೊಂದರೆಯಾಗುವ ಸಾಧ್ಯತೆ ಎದುರಾಗುತ್ತದೆ ಎಂಬುದು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಲೋಚನೆ. ಈ ಹಿನ್ನೆಲೆ ಭಯಗೊಂಡು ಗೋಕಾಕ್ ಕ್ಷೇತ್ರಕ್ಕೆ ಒಂದು ಬಾರಿಯೂ ಕಾಲಿಡದೆ, ಯುದ್ಧಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿದ್ರಾ ಹೆಬ್ಬಾಳ್ಕರ್ ಎಂದು ಕ್ಷೇತ್ರದ ಜನ ಮಾತನಾಡಿಕೊಳ್ಳತೊಡಗಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಾರದಂತೆ ಕೆಲವು ಬಿಜೆಪಿ ನಾಯಕರು ಹೆಬ್ಬಾಳ್ಕರ್ ಮನವೊಲಿಸಿದ್ದಾರೆ. ಹಾಗಾಗಿ, ರಾಜಕೀಯ ಭವಿಷ್ಯ ದೃಷ್ಟಿಯಿಂದ ಸೈಲೆಂಟ್ ಆಗಿ ಹೆಬ್ಬಾಳ್ಕರ್ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ‌ ಗೋಕಾಕ್ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಡಿಕೆ ಶಿವಕುಮಾರ್ ಕೂಡ ಪ್ರಚಾರಕ್ಕೆ ಆಗಮಿಸಲಿದ್ದಾರೆ ಅಂದಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ