AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 24 ವರ್ಷದ ಫರಾನ್ ಎಂಬ ಯುವಕನಿಂದ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿದ್ದು, ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಶಾಸಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ತನ್ವೀರ್ ಸೇಠ್​ಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶಾಸಕರ ಮೇಲೆ ಹಲ್ಲೆ ನಡೆಸಿದ ಫರಾನ್​ನನ್ನು ಪೊಲೀಸರು […]

ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ
ಸಾಧು ಶ್ರೀನಾಥ್​
|

Updated on:Nov 18, 2019 | 12:50 PM

Share

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

24 ವರ್ಷದ ಫರಾನ್ ಎಂಬ ಯುವಕನಿಂದ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿದ್ದು, ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಶಾಸಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ತನ್ವೀರ್ ಸೇಠ್​ಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಶಾಸಕರ ಮೇಲೆ ಹಲ್ಲೆ ನಡೆಸಿದ ಫರಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳಕ್ಕೆ ನಗರ‌ ಪೊಲೀಸ್ ಆಯುಕ್ತರಾದ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯು.ಟಿ.ಖಾದರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಬಲಿಗನಿಂದಲೆ ತನ್ವೀರ್ ಸೇಠ್ ಗೆ ಹಲ್ಲೆ: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಯುವಕ ಶಾಸಕರ ಬೆಂಬಲಿಗ ಎಂದು ಹೇಳಲಾಗುತ್ತಿದೆ. ತನ್ವೀರ್ ಸೇಠ್ ಜೊತೆ ಬ್ಯಾನರ್ ನಲ್ಲಿ ಇರುವ ಪೋಟೋ ವೈರಲ್ ಆಗಿದೆ.

2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ: ಶಾಸಕ ತನ್ವೀರ್ ಸೇಠ್​ಗೆ ರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

Published On - 6:31 am, Mon, 18 November 19

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು