AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರಿಗೂ ಈ ಆರೋಪಿಗಳಿಗೂ ಏನು ಸಂಬಂಧ? ಟ್ವಿಟರ್ ಸಮರದಲ್ಲಿ ಕಾಂಗ್ರೆಸ್​​ ಪ್ರಶ್ನೆ

ಹೆಣ್ಣು ಮಕ್ಕಳ ದುರ್ಬಳಕೆಯನ್ನು ಸಮರ್ಥಿಸುತ್ತಿರುವ ಬಿಜೆಪಿ, ದೇಶದ್ರೋಹಿ ಹಾಗೂ ಅತ್ಯಾಚಾರಿಯೊಂದಿಗೆ ನರೇಂದ್ರ ಮೋದಿ ಅವರಿಗೆ ಏನು ಸಂಬಂಧ? ತೇಜಸ್ವಿ ಸೂರ್ಯ ಅವರಿಗೂ ಡ್ರಗ್ ಡೀಲರ್‌ಗೂ ಏನು ಸಂಬಂಧ? ಪ್ರತಾಪ್​ ಸಿಂಹ ಹಾಗೂ ಈ ಆರೋಪಿಗೂ ಏನು ಸಂಬಂಧ ಲಕ್ಷ್ಮಣ ಸವದಿ ಹಾಗೂ ಯುವರಾಜನಿಗೂ ಏನು ಸಂಬಂಧ? ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತಂದಿದ್ಯಾರು? - ಕಾಂಗ್ರೆಸ್​ ಟ್ವೀಟ್​

ಬಿಜೆಪಿ ನಾಯಕರಿಗೂ ಈ ಆರೋಪಿಗಳಿಗೂ ಏನು ಸಂಬಂಧ? ಟ್ವಿಟರ್ ಸಮರದಲ್ಲಿ ಕಾಂಗ್ರೆಸ್​​ ಪ್ರಶ್ನೆ
ಕಾಂಗ್ರೆಸ್​​ ಹಂಚಿಕೊಂಡಿರುವ ಫೋಟೋಗಳು
Skanda
|

Updated on: Mar 17, 2021 | 1:46 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ನಡುವೆ ಜಟಾಪಟಿ ಜೋರಾಗಿದ್ದು, ಇದೀಗ ಎರಡೂ ಪಕ್ಷಗಳು ಟ್ವಿಟರ್​ ವಾರ್ ಶುರುಹಚ್ಚಿಕೊಂಡಿವೆ. ಅಶ್ಲೀಲ ಸಿಡಿ ಹಿಂದೆ ಇರುವುದು ಮಹಾನಾಯಕರೋ, ಮಹಾನಾಯಕಿಯೋ ಎಂದು ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರತ್ತ ಬೊಟ್ಟು ಮಾಡಿದ್ದ ಬಿಜೆಪಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡುತ್ತಾ ಬಂದಿದೆ. ಇಂದು ಬೆಳಗ್ಗೆ ಸಿಡಿ ಮಾಸ್ಟರ್ ಮೈಂಡ್ ಎನ್ನಲಾದ ನರೇಶ್​ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಲ್ಲಿರುವ ಫೋಟೋ ಒಂದನ್ನು ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದ ಬಿಜೆಪಿ, ಇವರಿಬ್ಬರಿಗೂ ಏನು ಸಂಬಂಧ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿತ್ತು. ಅದಕ್ಕೀಗ ತಿರುಗೇಟು ನೀಡಿರುವ ಕಾಂಗ್ರೆಸ್​ ಬಿಜೆಪಿಯ ನಾಯಕರು ಕೆಲ ಆರೋಪಿಗಳೊಂದಿಗೆ ತೆಗೆಸಿಕೊಂಡಿರುವ ಫೋಟೋವನ್ನು ಟ್ವೀಟ್​ ಮಾಡಿದೆ.

ಹೆಣ್ಣು ಮಕ್ಕಳ ದುರ್ಬಳಕೆಯನ್ನು ಸಮರ್ಥಿಸುತ್ತಿರುವ ಬಿಜೆಪಿ, ದೇಶದ್ರೋಹಿ ಹಾಗೂ ಅತ್ಯಾಚಾರಿಯೊಂದಿಗೆ ನರೇಂದ್ರ ಮೋದಿ ಅವರಿಗೆ ಏನು ಸಂಬಂಧ? ತೇಜಸ್ವಿ ಸೂರ್ಯ ಅವರಿಗೂ ಡ್ರಗ್ ಡೀಲರ್‌ಗೂ ಏನು ಸಂಬಂಧ? ಪ್ರತಾಪ್​ ಸಿಂಹ ಹಾಗೂ ಈ ಆರೋಪಿಗೂ ಏನು ಸಂಬಂಧ ಲಕ್ಷ್ಮಣ ಸವದಿ ಹಾಗೂ ಯುವರಾಜನಿಗೂ ಏನು ಸಂಬಂಧ? ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತಂದಿದ್ಯಾರು? ಎಂಬ ತಲೆಬರಹದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತೇಜಸ್ವಿ ಸೂರ್ಯ, ಪ್ರತಾಪ್​ ಸಿಂಹ, ಲಕ್ಷ್ಮಣ ಸವದಿ ಅವರು ಕೆಲ ಆರೋಪಿಗಳೊಂದಿಗೆ ನಿಂತಿರುವ ಫೋಟೋಗಳನ್ನು ಹಂಚಿಕೊಂಡಿದೆ.

ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಕಿತ್ತಾಟ ತಾರಕಕ್ಕೇರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಚಾರಗಳನ್ನೆಲ್ಲಾ ಮುನ್ನೆಲೆಗೆ ತಂದು ಎರಡೂ ಪಕ್ಷದವರು ಕಿತ್ತಾಡುತ್ತಿದ್ದಾರೆ. ಸದ್ಯ ಈ ಜಗಳ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆ ಎನ್ನುವುದು ಗೊತ್ತಿಲ್ಲವಾದರೂ, ಎರಡೂ ಪಕ್ಷದ ಒಂದಷ್ಟು ನಾಯಕರುಗಳ ಮೇಲೆ ಆರೋಪಗಳ ಸುರಿಮಳೆ ಆಗುವುದಂತೂ ಬಹುತೇಕ ನಿಶ್ಚಿತ ಎನ್ನುವಂತೆ ತೋರುತ್ತಿದೆ.

ಇದನ್ನೂ ಓದಿ: ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ