AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರಿಗೂ ಈ ಆರೋಪಿಗಳಿಗೂ ಏನು ಸಂಬಂಧ? ಟ್ವಿಟರ್ ಸಮರದಲ್ಲಿ ಕಾಂಗ್ರೆಸ್​​ ಪ್ರಶ್ನೆ

ಹೆಣ್ಣು ಮಕ್ಕಳ ದುರ್ಬಳಕೆಯನ್ನು ಸಮರ್ಥಿಸುತ್ತಿರುವ ಬಿಜೆಪಿ, ದೇಶದ್ರೋಹಿ ಹಾಗೂ ಅತ್ಯಾಚಾರಿಯೊಂದಿಗೆ ನರೇಂದ್ರ ಮೋದಿ ಅವರಿಗೆ ಏನು ಸಂಬಂಧ? ತೇಜಸ್ವಿ ಸೂರ್ಯ ಅವರಿಗೂ ಡ್ರಗ್ ಡೀಲರ್‌ಗೂ ಏನು ಸಂಬಂಧ? ಪ್ರತಾಪ್​ ಸಿಂಹ ಹಾಗೂ ಈ ಆರೋಪಿಗೂ ಏನು ಸಂಬಂಧ ಲಕ್ಷ್ಮಣ ಸವದಿ ಹಾಗೂ ಯುವರಾಜನಿಗೂ ಏನು ಸಂಬಂಧ? ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತಂದಿದ್ಯಾರು? - ಕಾಂಗ್ರೆಸ್​ ಟ್ವೀಟ್​

ಬಿಜೆಪಿ ನಾಯಕರಿಗೂ ಈ ಆರೋಪಿಗಳಿಗೂ ಏನು ಸಂಬಂಧ? ಟ್ವಿಟರ್ ಸಮರದಲ್ಲಿ ಕಾಂಗ್ರೆಸ್​​ ಪ್ರಶ್ನೆ
ಕಾಂಗ್ರೆಸ್​​ ಹಂಚಿಕೊಂಡಿರುವ ಫೋಟೋಗಳು
Skanda
|

Updated on: Mar 17, 2021 | 1:46 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ನಡುವೆ ಜಟಾಪಟಿ ಜೋರಾಗಿದ್ದು, ಇದೀಗ ಎರಡೂ ಪಕ್ಷಗಳು ಟ್ವಿಟರ್​ ವಾರ್ ಶುರುಹಚ್ಚಿಕೊಂಡಿವೆ. ಅಶ್ಲೀಲ ಸಿಡಿ ಹಿಂದೆ ಇರುವುದು ಮಹಾನಾಯಕರೋ, ಮಹಾನಾಯಕಿಯೋ ಎಂದು ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರತ್ತ ಬೊಟ್ಟು ಮಾಡಿದ್ದ ಬಿಜೆಪಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡುತ್ತಾ ಬಂದಿದೆ. ಇಂದು ಬೆಳಗ್ಗೆ ಸಿಡಿ ಮಾಸ್ಟರ್ ಮೈಂಡ್ ಎನ್ನಲಾದ ನರೇಶ್​ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಲ್ಲಿರುವ ಫೋಟೋ ಒಂದನ್ನು ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದ ಬಿಜೆಪಿ, ಇವರಿಬ್ಬರಿಗೂ ಏನು ಸಂಬಂಧ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿತ್ತು. ಅದಕ್ಕೀಗ ತಿರುಗೇಟು ನೀಡಿರುವ ಕಾಂಗ್ರೆಸ್​ ಬಿಜೆಪಿಯ ನಾಯಕರು ಕೆಲ ಆರೋಪಿಗಳೊಂದಿಗೆ ತೆಗೆಸಿಕೊಂಡಿರುವ ಫೋಟೋವನ್ನು ಟ್ವೀಟ್​ ಮಾಡಿದೆ.

ಹೆಣ್ಣು ಮಕ್ಕಳ ದುರ್ಬಳಕೆಯನ್ನು ಸಮರ್ಥಿಸುತ್ತಿರುವ ಬಿಜೆಪಿ, ದೇಶದ್ರೋಹಿ ಹಾಗೂ ಅತ್ಯಾಚಾರಿಯೊಂದಿಗೆ ನರೇಂದ್ರ ಮೋದಿ ಅವರಿಗೆ ಏನು ಸಂಬಂಧ? ತೇಜಸ್ವಿ ಸೂರ್ಯ ಅವರಿಗೂ ಡ್ರಗ್ ಡೀಲರ್‌ಗೂ ಏನು ಸಂಬಂಧ? ಪ್ರತಾಪ್​ ಸಿಂಹ ಹಾಗೂ ಈ ಆರೋಪಿಗೂ ಏನು ಸಂಬಂಧ ಲಕ್ಷ್ಮಣ ಸವದಿ ಹಾಗೂ ಯುವರಾಜನಿಗೂ ಏನು ಸಂಬಂಧ? ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತಂದಿದ್ಯಾರು? ಎಂಬ ತಲೆಬರಹದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತೇಜಸ್ವಿ ಸೂರ್ಯ, ಪ್ರತಾಪ್​ ಸಿಂಹ, ಲಕ್ಷ್ಮಣ ಸವದಿ ಅವರು ಕೆಲ ಆರೋಪಿಗಳೊಂದಿಗೆ ನಿಂತಿರುವ ಫೋಟೋಗಳನ್ನು ಹಂಚಿಕೊಂಡಿದೆ.

ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಕಿತ್ತಾಟ ತಾರಕಕ್ಕೇರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಚಾರಗಳನ್ನೆಲ್ಲಾ ಮುನ್ನೆಲೆಗೆ ತಂದು ಎರಡೂ ಪಕ್ಷದವರು ಕಿತ್ತಾಡುತ್ತಿದ್ದಾರೆ. ಸದ್ಯ ಈ ಜಗಳ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆ ಎನ್ನುವುದು ಗೊತ್ತಿಲ್ಲವಾದರೂ, ಎರಡೂ ಪಕ್ಷದ ಒಂದಷ್ಟು ನಾಯಕರುಗಳ ಮೇಲೆ ಆರೋಪಗಳ ಸುರಿಮಳೆ ಆಗುವುದಂತೂ ಬಹುತೇಕ ನಿಶ್ಚಿತ ಎನ್ನುವಂತೆ ತೋರುತ್ತಿದೆ.

ಇದನ್ನೂ ಓದಿ: ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ