AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು. ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ […]

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?
KUSHAL V
|

Updated on: Jul 05, 2020 | 2:19 PM

Share

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು.

ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ ನೀಡಿದ್ದರು. ಆದರೆ, ಕೊರೊನಾಗೆ ಹೆದರಿ ಅವರು ರೈಲಿನಲ್ಲಿ ಮಂಗಳೂರಿಗೆ ಬರಲು ಹಿಂದೇಟು ಹಾಕಿದ್ದರು. ಹೀಗಾಗಿ, ನವೀನ್​ ಆ ಐವರು ಮೇಸ್ತ್ರಿಗಳಿಗೂ ವಿಮಾನದ ಮೂಲಕ ಕೋಲ್ಕತ್ತಾದಿಂದ ಮಂಗಳೂರಿಗೆ ಬರಲು ಟಿಕೆಟ್ ಬುಕ್​ ಮಾಡಿಕೊಟ್ಟಿದ್ದಾರೆ. ಟಿಕೆಟ್​ಗಾಗಿ ತಲಾ 7 ಸಾವಿರ ರೂಪಾಯಿಯಂತೆ ಒಟ್ಟು 35 ಸಾವಿರ ರೂಪಾಯಿ ಖರ್ಚು ಮಾಡಿರುವ ಬಿಲ್ಡರ್ ಜೊತೆಗೆ ಐವರು ಕಾರ್ಮಿಕರ ಕ್ವಾರೆಂಟೈನ್​ಗಾಗಿ ಮಂಗಳೂರಿನಲ್ಲಿ ವ್ಯವಸ್ಥೆ ಸಹ ಮಾಡಿದ್ದಾರಂತೆ.

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ