AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು. ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ […]

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?
KUSHAL V
|

Updated on: Jul 05, 2020 | 2:19 PM

Share

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು.

ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ ನೀಡಿದ್ದರು. ಆದರೆ, ಕೊರೊನಾಗೆ ಹೆದರಿ ಅವರು ರೈಲಿನಲ್ಲಿ ಮಂಗಳೂರಿಗೆ ಬರಲು ಹಿಂದೇಟು ಹಾಕಿದ್ದರು. ಹೀಗಾಗಿ, ನವೀನ್​ ಆ ಐವರು ಮೇಸ್ತ್ರಿಗಳಿಗೂ ವಿಮಾನದ ಮೂಲಕ ಕೋಲ್ಕತ್ತಾದಿಂದ ಮಂಗಳೂರಿಗೆ ಬರಲು ಟಿಕೆಟ್ ಬುಕ್​ ಮಾಡಿಕೊಟ್ಟಿದ್ದಾರೆ. ಟಿಕೆಟ್​ಗಾಗಿ ತಲಾ 7 ಸಾವಿರ ರೂಪಾಯಿಯಂತೆ ಒಟ್ಟು 35 ಸಾವಿರ ರೂಪಾಯಿ ಖರ್ಚು ಮಾಡಿರುವ ಬಿಲ್ಡರ್ ಜೊತೆಗೆ ಐವರು ಕಾರ್ಮಿಕರ ಕ್ವಾರೆಂಟೈನ್​ಗಾಗಿ ಮಂಗಳೂರಿನಲ್ಲಿ ವ್ಯವಸ್ಥೆ ಸಹ ಮಾಡಿದ್ದಾರಂತೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?