AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು. ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ […]

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?
KUSHAL V
|

Updated on: Jul 05, 2020 | 2:19 PM

Share

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು.

ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ ನೀಡಿದ್ದರು. ಆದರೆ, ಕೊರೊನಾಗೆ ಹೆದರಿ ಅವರು ರೈಲಿನಲ್ಲಿ ಮಂಗಳೂರಿಗೆ ಬರಲು ಹಿಂದೇಟು ಹಾಕಿದ್ದರು. ಹೀಗಾಗಿ, ನವೀನ್​ ಆ ಐವರು ಮೇಸ್ತ್ರಿಗಳಿಗೂ ವಿಮಾನದ ಮೂಲಕ ಕೋಲ್ಕತ್ತಾದಿಂದ ಮಂಗಳೂರಿಗೆ ಬರಲು ಟಿಕೆಟ್ ಬುಕ್​ ಮಾಡಿಕೊಟ್ಟಿದ್ದಾರೆ. ಟಿಕೆಟ್​ಗಾಗಿ ತಲಾ 7 ಸಾವಿರ ರೂಪಾಯಿಯಂತೆ ಒಟ್ಟು 35 ಸಾವಿರ ರೂಪಾಯಿ ಖರ್ಚು ಮಾಡಿರುವ ಬಿಲ್ಡರ್ ಜೊತೆಗೆ ಐವರು ಕಾರ್ಮಿಕರ ಕ್ವಾರೆಂಟೈನ್​ಗಾಗಿ ಮಂಗಳೂರಿನಲ್ಲಿ ವ್ಯವಸ್ಥೆ ಸಹ ಮಾಡಿದ್ದಾರಂತೆ.

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ