AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದು ಮೀನು ಗೂಬೆ, ನಕ್ಷತ್ರ ಆಮೆ ಮಾರಲು ಯತ್ನಿಸಿದ ಕಿರಾತಕರು ಅಂದರ್​

ಮೈಸೂರು: ಜಿಲ್ಲೆಯ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂದು ಮೀನು ಗೂಬೆ ಮಾರುತ್ತಿದ್ದ ಮೂವರನ್ನು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಂಡ್ಯ ಮೂಲದ ಕುಮಾರ್, ಮೊಹಮ್ಮದ್ ರಫಿ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಂದು ಮೀನು‌ ಗೂಬೆ, ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಅರಣ್ಯ ಸಂಚಾರಿ ದಳದ DCF ಎ.ಟಿ ಪೂವಯ್ಯರ ಮಾರ್ಗದರ್ಶನದಲ್ಲಿ ಮತ್ತು RFO ವಿವೇಕ್ […]

ಕಂದು ಮೀನು ಗೂಬೆ, ನಕ್ಷತ್ರ ಆಮೆ ಮಾರಲು ಯತ್ನಿಸಿದ ಕಿರಾತಕರು ಅಂದರ್​
ಪೃಥ್ವಿಶಂಕರ
|

Updated on:Nov 21, 2020 | 11:58 AM

Share

ಮೈಸೂರು: ಜಿಲ್ಲೆಯ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂದು ಮೀನು ಗೂಬೆ ಮಾರುತ್ತಿದ್ದ ಮೂವರನ್ನು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಂಡ್ಯ ಮೂಲದ ಕುಮಾರ್, ಮೊಹಮ್ಮದ್ ರಫಿ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಂದು ಮೀನು‌ ಗೂಬೆ, ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಅರಣ್ಯ ಸಂಚಾರಿ ದಳದ DCF ಎ.ಟಿ ಪೂವಯ್ಯರ ಮಾರ್ಗದರ್ಶನದಲ್ಲಿ ಮತ್ತು RFO ವಿವೇಕ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ನಕ್ಷತ್ರ ಆಮೆ ಮಾರಾಟ.. ನಾಲ್ವರ ಬಂಧನ ಇತ್ತ, ಅಕ್ರಮವಾಗಿ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಕೊಡಗು ಜಿಲ್ಲೆಯ ಮಡಿಕೇರಿಯ ಸಿಐಡಿ ಪೊಲೀಸರ ಅರಣ್ಯ ಘಟಕದ ಸಿಬ್ಬಂದಿ ಬಂಧಿಸಿದ್ದಾರೆ. ಅಂದ ಹಾಗೆ, ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲುನಲ್ಲಿ ನಡೆದಿದೆ.

ಆಂಧ್ರಪ್ರದೇಶದ ಲಕ್ಷ್ಮಣ, ರಾಮಪೋಗು ಲಕ್ಷ್ಮೀನಾರಾಯಣ, ನಾಗೇಶ್ ಹಾಗೂ ತೆಲಂಗಾಣದ ತೆಲಗು ತಿಮ್ಮಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಗೋಣಿಕೊಪ್ಪಲು ಪಟ್ಟಣಕ್ಕೆ ನಕ್ಷತ್ರ ಆಮೆ ಮಾರಾಟ ಮಾಡಲು ಬಂದಿದ್ದ ಆರೋಪಿಗಳು, 1,50,000 ರೂಪಾಯಿಗೆ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಂದ ಮಹೀಂದ್ರ ವೆರೀಟೋ ಕಾರು ಮತ್ತು ಆಮೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೀಪಾವಳಿ ವೇಳೆ ಗೂಬೆ ಪೂಜೆ: ಲಕ್ಷ್ಮೀ ವಾಹನ ಎಂದು ತಿಳಿದಿದ್ದೂ ಕೊಲ್ತಾರೆ.. ಏಕೆ ಇಂತಹ ದುಷ್ಕೃತ್ಯ?

Published On - 11:33 am, Sat, 21 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ