AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದು ಮೀನು ಗೂಬೆ, ನಕ್ಷತ್ರ ಆಮೆ ಮಾರಲು ಯತ್ನಿಸಿದ ಕಿರಾತಕರು ಅಂದರ್​

ಮೈಸೂರು: ಜಿಲ್ಲೆಯ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂದು ಮೀನು ಗೂಬೆ ಮಾರುತ್ತಿದ್ದ ಮೂವರನ್ನು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಂಡ್ಯ ಮೂಲದ ಕುಮಾರ್, ಮೊಹಮ್ಮದ್ ರಫಿ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಂದು ಮೀನು‌ ಗೂಬೆ, ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಅರಣ್ಯ ಸಂಚಾರಿ ದಳದ DCF ಎ.ಟಿ ಪೂವಯ್ಯರ ಮಾರ್ಗದರ್ಶನದಲ್ಲಿ ಮತ್ತು RFO ವಿವೇಕ್ […]

ಕಂದು ಮೀನು ಗೂಬೆ, ನಕ್ಷತ್ರ ಆಮೆ ಮಾರಲು ಯತ್ನಿಸಿದ ಕಿರಾತಕರು ಅಂದರ್​
ಪೃಥ್ವಿಶಂಕರ
|

Updated on:Nov 21, 2020 | 11:58 AM

Share

ಮೈಸೂರು: ಜಿಲ್ಲೆಯ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂದು ಮೀನು ಗೂಬೆ ಮಾರುತ್ತಿದ್ದ ಮೂವರನ್ನು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಂಡ್ಯ ಮೂಲದ ಕುಮಾರ್, ಮೊಹಮ್ಮದ್ ರಫಿ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಂದು ಮೀನು‌ ಗೂಬೆ, ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಅರಣ್ಯ ಸಂಚಾರಿ ದಳದ DCF ಎ.ಟಿ ಪೂವಯ್ಯರ ಮಾರ್ಗದರ್ಶನದಲ್ಲಿ ಮತ್ತು RFO ವಿವೇಕ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ನಕ್ಷತ್ರ ಆಮೆ ಮಾರಾಟ.. ನಾಲ್ವರ ಬಂಧನ ಇತ್ತ, ಅಕ್ರಮವಾಗಿ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಕೊಡಗು ಜಿಲ್ಲೆಯ ಮಡಿಕೇರಿಯ ಸಿಐಡಿ ಪೊಲೀಸರ ಅರಣ್ಯ ಘಟಕದ ಸಿಬ್ಬಂದಿ ಬಂಧಿಸಿದ್ದಾರೆ. ಅಂದ ಹಾಗೆ, ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲುನಲ್ಲಿ ನಡೆದಿದೆ.

ಆಂಧ್ರಪ್ರದೇಶದ ಲಕ್ಷ್ಮಣ, ರಾಮಪೋಗು ಲಕ್ಷ್ಮೀನಾರಾಯಣ, ನಾಗೇಶ್ ಹಾಗೂ ತೆಲಂಗಾಣದ ತೆಲಗು ತಿಮ್ಮಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಗೋಣಿಕೊಪ್ಪಲು ಪಟ್ಟಣಕ್ಕೆ ನಕ್ಷತ್ರ ಆಮೆ ಮಾರಾಟ ಮಾಡಲು ಬಂದಿದ್ದ ಆರೋಪಿಗಳು, 1,50,000 ರೂಪಾಯಿಗೆ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಂದ ಮಹೀಂದ್ರ ವೆರೀಟೋ ಕಾರು ಮತ್ತು ಆಮೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೀಪಾವಳಿ ವೇಳೆ ಗೂಬೆ ಪೂಜೆ: ಲಕ್ಷ್ಮೀ ವಾಹನ ಎಂದು ತಿಳಿದಿದ್ದೂ ಕೊಲ್ತಾರೆ.. ಏಕೆ ಇಂತಹ ದುಷ್ಕೃತ್ಯ?

Published On - 11:33 am, Sat, 21 November 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್