AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲುಪಾಲಾದ ‘ಅಣ್ಣ’​ನ ಜಾಮೀನಿಗಾಗಿ.. ಹಫ್ತಾ ವಸೂಲಿ​ಗೆ ಇಳಿದು.. ಕೊನೆಗೆ ತಾವೇ ಅಂದರ್​ ಆದರು

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲಿಪಾಲಾದ ತಮ್ಮ ಗ್ಯಾಂಗ್​ ಲೀಡರ್​ನ ಜಾಮೀನಿನ ಮೇಲೆ ಬಿಡಿಸಲು ಆತನ ಸಹಚರರು ಹಫ್ತಾ ವಸೂಲಿಗೆ ಇಳಿದ ಸ್ವಾರಸ್ಯಕರ ಪ್ರಸಂಗ ವರದಿಯಾಗಿದೆ. ಸದ್ಯ, ಹಫ್ತಾ ವಸೂಲಿಗೆ ಯತ್ನಿಸಿದ್ದ 12 ಆರೋಪಿಗಳನ್ನು ಬಂಧಿಸಲಾಗಿದೆ. ಯಲಹಂಕ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಬಂಧಿತರೆಲ್ಲರೂ ಪಾಲನಹಳ್ಳಿ ಪಾಪಣ್ಣನ ಸಹಚರರು. ಪ್ರಶಾಂತ್ ಕುಮಾರ್, ಸಂಜಯ್, ನವೀನ್, ಮಂಜುನಾಥ ರಮೇಶ್, ಸ್ಯಾಮುಯಲ್, ಉಮೇಶ್, ಸುಬ್ರಮಣಿ, ಮಂಜುನಾಥ, ನಾಗರಾಜ, ರಮೇಶ್, ಸುರೇಶ್ ಬಂಧಿತ ಆರೋಪಿಗಳು. ಏನಿದು ‘ಜಾಮೀನಿಗಾಗಿ ಹಫ್ತಾ ವಸೂಲಿ’ ಪ್ರಕರಣ? ಅಂದ […]

ಜೈಲುಪಾಲಾದ ‘ಅಣ್ಣ’​ನ ಜಾಮೀನಿಗಾಗಿ.. ಹಫ್ತಾ ವಸೂಲಿ​ಗೆ ಇಳಿದು.. ಕೊನೆಗೆ ತಾವೇ ಅಂದರ್​ ಆದರು
KUSHAL V
|

Updated on: Nov 16, 2020 | 6:53 PM

Share

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲಿಪಾಲಾದ ತಮ್ಮ ಗ್ಯಾಂಗ್​ ಲೀಡರ್​ನ ಜಾಮೀನಿನ ಮೇಲೆ ಬಿಡಿಸಲು ಆತನ ಸಹಚರರು ಹಫ್ತಾ ವಸೂಲಿಗೆ ಇಳಿದ ಸ್ವಾರಸ್ಯಕರ ಪ್ರಸಂಗ ವರದಿಯಾಗಿದೆ. ಸದ್ಯ, ಹಫ್ತಾ ವಸೂಲಿಗೆ ಯತ್ನಿಸಿದ್ದ 12 ಆರೋಪಿಗಳನ್ನು ಬಂಧಿಸಲಾಗಿದೆ. ಯಲಹಂಕ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಬಂಧಿತರೆಲ್ಲರೂ ಪಾಲನಹಳ್ಳಿ ಪಾಪಣ್ಣನ ಸಹಚರರು. ಪ್ರಶಾಂತ್ ಕುಮಾರ್, ಸಂಜಯ್, ನವೀನ್, ಮಂಜುನಾಥ ರಮೇಶ್, ಸ್ಯಾಮುಯಲ್, ಉಮೇಶ್, ಸುಬ್ರಮಣಿ, ಮಂಜುನಾಥ, ನಾಗರಾಜ, ರಮೇಶ್, ಸುರೇಶ್ ಬಂಧಿತ ಆರೋಪಿಗಳು.

ಏನಿದು ‘ಜಾಮೀನಿಗಾಗಿ ಹಫ್ತಾ ವಸೂಲಿ’ ಪ್ರಕರಣ? ಅಂದ ಹಾಗೆ, ಬಂಧಿತ ಆರೋಪಿಗಳ ಬಾಸ್ ಪಾಲನಹಳ್ಳಿ ಪಾಪಣ್ಣ ಮತ್ತು ಆತನ ಸಹಚರ ಸೈಕೋ ಸೋಮ​ ಕೊಲೆ ಕೇಸ್​ ಒಂದರಲ್ಲಿ ಜೈಲುಪಾಲಾಗಿದ್ದಾರೆ. ಹಾಗಾಗಿ, ತಮ್ಮ ‘ಅಣ್ಣ’ನ ಮತ್ತು ಸೋಮ‌ನನ್ನು ಜಾಮೀನಿನ ಮೇಲೆ ಬಿಡಿಸಲು ಅವರ ಸಹಚರರು ಹಣಕ್ಕಾಗಿ ಹಫ್ತಾ ವಸೂಲಿಗೆ ಇಳಿದಿದ್ದರು. ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದರು. ಅಷ್ಟೇ ಅಲ್ಲ, ಹಣ ನೀಡಲು ಒಪ್ಪದ ರಮೇಶ್ ಎಂಬುವವರಿಗೆ ಚಾಕು ಸಹ ಇರಿದಿದ್ದರು. ಒಟ್ನಲ್ಲಿ, ತಮ್ಮ ‘ಅಣ್ಣ’ನನ್ನ ಬೇಲ್​ ಮೇಲೆ ಬಿಡಿಸಲು ಯತ್ನಿಸಿದ ಆರೋಪಿಗಳು ಇದೀಗ ತಾವೇ ಜೈಲು ಸೇರಲಿದ್ದಾರೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ