AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಧರಿಸಿ ಪೊಲೀಸ್​ ಪರೀಕ್ಷೆ ಬರೆಯಲು ಬಂದ ನಕಲಿ ಅಭ್ಯರ್ಥಿ ಈಗ ಖಾಕಿ ಅತಿಥಿ!

ಬೆಂಗಳೂರು ಗ್ರಾಮಾಂತರ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಲೇ ಇದೆ. ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನ ಕಡ್ಡಾಯಗೊಳಿಸಿದೆ. ಆದರೆ ಮಾಸ್ಕ್ ಧರಿಸುವುದನ್ನೇ ತನ್ನ ಲಾಭಕ್ಕೆ ಬಳಸಿಕೊಂಡ ವ್ಯಕ್ತಿಯೋರ್ವ ಇಂದು ನಡೆಯುತ್ತಿದ್ದ ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಲಿಖಿತ ಪರೀಕ್ಷೆಗೆ ಅಭ್ಯರ್ಥಿಯ ಬದಲಾಗಿ ಹಾಜರಾಗಿ ಪರೀಕ್ಷೆ ಬರೆಯುತ್ತಿರುವಾಗ ಖಾಕಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಗಣೇಶನಗುಡಿ ಗ್ರಾಮದ ಬಳಿ ಇರುವ ಸಿದ್ದಗಂಗಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಗರೀಕ ಪೊಲೀಸ್ […]

ಮಾಸ್ಕ್​ ಧರಿಸಿ ಪೊಲೀಸ್​ ಪರೀಕ್ಷೆ ಬರೆಯಲು ಬಂದ ನಕಲಿ ಅಭ್ಯರ್ಥಿ ಈಗ ಖಾಕಿ ಅತಿಥಿ!
ಆಯೇಷಾ ಬಾನು
ಆಯೇಷಾ ಬಾನು|

Updated on:Sep 20, 2020 | 3:13 PM

Share

ಬೆಂಗಳೂರು ಗ್ರಾಮಾಂತರ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಲೇ ಇದೆ. ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನ ಕಡ್ಡಾಯಗೊಳಿಸಿದೆ. ಆದರೆ ಮಾಸ್ಕ್ ಧರಿಸುವುದನ್ನೇ ತನ್ನ ಲಾಭಕ್ಕೆ ಬಳಸಿಕೊಂಡ ವ್ಯಕ್ತಿಯೋರ್ವ ಇಂದು ನಡೆಯುತ್ತಿದ್ದ ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಲಿಖಿತ ಪರೀಕ್ಷೆಗೆ ಅಭ್ಯರ್ಥಿಯ ಬದಲಾಗಿ ಹಾಜರಾಗಿ ಪರೀಕ್ಷೆ ಬರೆಯುತ್ತಿರುವಾಗ ಖಾಕಿ ಕೈಗೆ ಸಿಕ್ಕಿಬಿದ್ದಿದ್ದಾನೆ.

ಜಿಲ್ಲೆಯ ನೆಲಮಂಗಲ ತಾಲೂಕಿನ ಗಣೇಶನಗುಡಿ ಗ್ರಾಮದ ಬಳಿ ಇರುವ ಸಿದ್ದಗಂಗಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಗರೀಕ ಪೊಲೀಸ್ ಕಾನ್ಸ್​ಟೇಬಲ್ ಪರೀಕ್ಷೆ ನಡೆಯಿತು. ಈ ವೇಳೆ ಪರೀಕ್ಷಾ ಅಭ್ಯರ್ಥಿಯಾದ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ನಿವಾಸಿ ಮಂಜುನಾಥ್ (21) ಬದಲು ಆತನ ಹೆಸರಿನಲ್ಲಿ ಕೋಲಾರ ಜಿಲ್ಲೆ‌ ಶ್ರೀನಿವಾಸಪುರ ತಾಲೂಕಿನ ತೇರನಹಳ್ಳಿ ನಿವಾಸಿ ಶಿವಪ್ರಸಾದ್ (28) ಪರೀಕ್ಷೆ ಬರೆಯಲು ಕೂತಿದ್ದನಂತೆ.

ಪರೀಕ್ಷಾ ಕೊಠಡಿಗೆ ಭೇಟಿಕೊಟ್ಟ ಸರ್ಕಲ್ ಇನ್​ಸ್ಪೆಕ್ಟರ್ ಶಿವಣ್ಣ ಹಾಗೂ ಹೆಚ್ಚುವರಿ SP ಲಕ್ಷ್ಮಿ ಗಣೇಶ್‌ ಪರಿಶೀಲನೆ ನಡೆಸಿದ ವೇಳೆ ನಕಲಿ ಅಭ್ಯರ್ಥಿ ಸಿಕ್ಕಿಬಿದ್ದಿದ್ದಾನೆ.

ಕೊವಿಡ್‌ನಿಂದ ಮಾಸ್ಕ್ ಧರಿಸುವುದನ್ನೇ ತನ್ನ ಅನುಕೂಲಕ್ಕೆ ಬಳಸಿಕೊಂಡ ನಕಲಿ ಅಭ್ಯರ್ಥಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ‌.

Published On - 2:39 pm, Sun, 20 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ