AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . […]

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ
ಸಾಧು ಶ್ರೀನಾಥ್​
| Edited By: |

Updated on: Aug 30, 2020 | 5:55 PM

Share

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ.

ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . ಈ ವೇಳೆ ಕಾರಿನ ಡೋರ್ ತೆಗೆದು ನೋಡಿದ ಪೊಲೀಸರಿಗೆ ಶಾಕ್ ಆಗಿದೆ. ಕಾರಿನ ಇಕ್ಕಟ್ಟಾದ ಜಾಗದಲ್ಲಿ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಕಿರಾತಕರು ತುಂಬಿದ್ದರು. ಕೂಡಲೆ ಪೊಲೀಸರು ಜಾನುವಾರಗಳನ್ನು ಕಾರಿನಿಂದ ಕೆಳಗಿಳಿಸಿ ರಕ್ಷಣೆ ಮಾಡಿದ್ದಾರೆ.

ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಜಾನುವಾರುಗಳ ಅಕ್ರಮ ಸಾಗಾಟಕ್ಕೆ ಬಳಸಿದ ಕಾರು ಉಮ್ಮರ್ ಮೊಯಿದ್ದೀನ್ ಎಂಬಾತನಿಗೆ ಸೇರಿದ್ದು ಎಂಬ ಮಾಹಿತಿ ನೀಡಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ