ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . […]

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ
ಸಾಧು ಶ್ರೀನಾಥ್​ Edited By:

Updated on: Aug 30, 2020 | 5:55 PM

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ.

ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . ಈ ವೇಳೆ ಕಾರಿನ ಡೋರ್ ತೆಗೆದು ನೋಡಿದ ಪೊಲೀಸರಿಗೆ ಶಾಕ್ ಆಗಿದೆ. ಕಾರಿನ ಇಕ್ಕಟ್ಟಾದ ಜಾಗದಲ್ಲಿ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಕಿರಾತಕರು ತುಂಬಿದ್ದರು. ಕೂಡಲೆ ಪೊಲೀಸರು ಜಾನುವಾರಗಳನ್ನು ಕಾರಿನಿಂದ ಕೆಳಗಿಳಿಸಿ ರಕ್ಷಣೆ ಮಾಡಿದ್ದಾರೆ.

ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಜಾನುವಾರುಗಳ ಅಕ್ರಮ ಸಾಗಾಟಕ್ಕೆ ಬಳಸಿದ ಕಾರು ಉಮ್ಮರ್ ಮೊಯಿದ್ದೀನ್ ಎಂಬಾತನಿಗೆ ಸೇರಿದ್ದು ಎಂಬ ಮಾಹಿತಿ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us