AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Alert ಬೆಂಗಳೂರಿಗರೇ ಎಚ್ಚರ! ಮನೆಯಿಂದ ಹೊರ ಕಾಲಿಡುವ ಮುನ್ನ ಈ ವರದಿ ಓದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರೋ ಜನರೇ ಎಚ್ಚರ.. ಎಚ್ಚರ..! ಮನೆಯಿಂದ ಹೊರಗೆ ಬರಬೇಕಾದ್ರೆ ಒಂದಲ್ಲಾ ಎರಡೆರಡು ಸಲ ಯೋಚಿಸಿ. ಫ್ರೀಡೌನ್ ಅಂತಾ ರಸ್ತೆಗೆ ಇಳಿಯೋ ಮುನ್ನ ಹುಷಾರ್!ಯಾಕಂದ್ರೆ ಬೆಂಗಳೂರಿನ 198 ವಾರ್ಡ್​ಗಳಲ್ಲಿ ಕೊರೊನಾ ತಾಂಡವವಾಡುತ್ತಿದೆ. 198 ವಾರ್ಡ್​ಗಳ ಪೈಕಿ 160 ವಾರ್ಡ್​ಗಳಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 28ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ 100ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾಗಿವೆ. ಹಾಗೂ 30ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ ಶೇ.80ಕ್ಕೂ ಹೆಚ್ಚು ಸೋಂಕು ತಗುಲಿರುವವರಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 11638 ಕಂಟೇನ್ಮೆಂಟ್ ಜೋನ್​ಗಳಿವೆ. ಇದರಲ್ಲಿ 9815 […]

Corona Alert ಬೆಂಗಳೂರಿಗರೇ ಎಚ್ಚರ! ಮನೆಯಿಂದ ಹೊರ ಕಾಲಿಡುವ ಮುನ್ನ ಈ ವರದಿ ಓದಿ
ಆಯೇಷಾ ಬಾನು
| Edited By: |

Updated on:Jul 24, 2020 | 3:58 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರೋ ಜನರೇ ಎಚ್ಚರ.. ಎಚ್ಚರ..! ಮನೆಯಿಂದ ಹೊರಗೆ ಬರಬೇಕಾದ್ರೆ ಒಂದಲ್ಲಾ ಎರಡೆರಡು ಸಲ ಯೋಚಿಸಿ. ಫ್ರೀಡೌನ್ ಅಂತಾ ರಸ್ತೆಗೆ ಇಳಿಯೋ ಮುನ್ನ ಹುಷಾರ್!ಯಾಕಂದ್ರೆ ಬೆಂಗಳೂರಿನ 198 ವಾರ್ಡ್​ಗಳಲ್ಲಿ ಕೊರೊನಾ ತಾಂಡವವಾಡುತ್ತಿದೆ.

198 ವಾರ್ಡ್​ಗಳ ಪೈಕಿ 160 ವಾರ್ಡ್​ಗಳಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 28ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ 100ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾಗಿವೆ. ಹಾಗೂ 30ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ ಶೇ.80ಕ್ಕೂ ಹೆಚ್ಚು ಸೋಂಕು ತಗುಲಿರುವವರಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 11638 ಕಂಟೇನ್ಮೆಂಟ್ ಜೋನ್​ಗಳಿವೆ. ಇದರಲ್ಲಿ 9815 ಸಕ್ರಿಯ ಕಂಟೇನ್ಮೆಂಟ್ ಜೋನ್​ಗಳಿವೆ. ಸುಮ್ಮಸುಮ್ಮನೆ ಬೀದಿಗಿಳಿದ್ರೆ ಕೊರೊನಾ ಬರೋದು ಕನ್ಫರ್ಮ್.

ಬೆಂಗಳೂರು ದಕ್ಷಿಣ ವಲಯವನ್ನು ಮೀರಿಸಲಿದೆಯಾ ಪಶ್ಚಿಮ ವಲಯ? ಬೆಂಗಳೂರು ಸೌತ್​ಗೆ ಸ್ಪರ್ಧೆ ನೀಡುವಂತೆ ಬೆಂಗಳೂರು ಪಶ್ಚಿಮ ವಲಯದಲ್ಲಿ ಕೇಸ್​ಗಳು ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ 420 ಪ್ರಕರಣಗಳು ಬೆಂಗಳೂರು ಪಶ್ಚಿಮ ವಲಯದಲ್ಲಿ ದಾಖಲಾಗಿವೆ. ಕಳೆದ ಹತ್ತು ದಿನಗಳಲ್ಲಿ ಬರೋಬ್ಬರಿ 3476 ಸೋಂಕಿತರು ವೆಸ್ಟ್ ಜೋನ್​ನಲ್ಲಿ ದೃಢವಾಗಿದ್ದಾರೆ.

ನಿನ್ನೆ ಎರಡನೇ ಅತಿ ಹೆಚ್ಚು ಸೋಂಕಿತರ ವಲಯವಾಗಿ ಪಶ್ಚಿಮ ವಲಯ ಕಾಣಿಸಿಕೊಂಡಿದೆ. ವಲಯ ಉಸ್ತುವಾರಿ ಡಿಸಿಎಂ ಡಾ.ಅಶ್ವಥ್ ನಾರಾಯಣ ಕ್ಷೇತ್ರದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಬೆಂಗಳೂರಿನ ಶೆ.22 ರಷ್ಟು ಸೋಂಕಿತರು ಪಶ್ಚಿಮ ವಲಯದವರೇ ಆಗಿದ್ದಾರೆ. ಇಷ್ಟೆಲ್ಲಾ ಆದ್ರೂ ಅಧಿಕಾರಿಗಳು ಸೋಂಕು ತಡೆಯುವ ಕ್ರಮದ ಬಗ್ಗೆ ತೀವ್ರ ನಿರ್ಲಕ್ಷ್ಯವಹಿಸುತ್ತಿದ್ದಾರೆ.

Published On - 8:30 am, Thu, 23 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ