ಕೊರೊನಾ ಭೀತಿ: ಇಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಮಾಡಿದ ಅಧಿಕಾರಿಗಳು! ಎಲ್ಲಿ?

ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆಯನ್ನು ತಾಲೂಕು ಆಡಳಿತ ರದ್ದು ಮಾಡಿಸಿದೆ. ಬಳ್ಳಾರಿ ಯುವಕನ ಜೊತೆ ಇಂದು ಗುಳೇದಗುಡ್ಡದ ಯುವತಿ ಮದುವೆ ನಡೆಯಬೇಕಿತ್ತು. ಆದ್ರೆ, ಯುವಕನ ತಾಯಿಗೆ ಕೊರೊನಾ ಪಾಸಿಟಿವ್ ಇದೆ ಎನ್ನುವ ಮಾಹಿತಿ ಇದೆ. ಅಲ್ಲದೆ, ಬಳ್ಳಾರಿ ಆಸ್ಪತ್ರೆಯಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಮಧುಮಗ ಹಾಗೂ ಸಂಬಂಧಿಕರು ಬಳ್ಳಾರಿಯಿಂದ ಬಸ್ ತೆಗೆದುಕೊಂಡು ಮದುವೆಗೆ ಗುಳೇದಗುಡ್ಡಕ್ಕೆ ಆಗಮಿಸಿದ್ದರು. ಈ ವಿಷಯ ತಿಳಿದು ರಾತ್ರಿಯೇ ಗುಳೇದಗುಡ್ಡ ತಾಲೂಕು ಆಡಳಿತ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮದುವೆಯನ್ನು ರದ್ದುಮಾಡಿಸಿ, […]

ಕೊರೊನಾ ಭೀತಿ: ಇಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಮಾಡಿದ ಅಧಿಕಾರಿಗಳು! ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Jun 26, 2020 | 12:53 PM

ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆಯನ್ನು ತಾಲೂಕು ಆಡಳಿತ ರದ್ದು ಮಾಡಿಸಿದೆ. ಬಳ್ಳಾರಿ ಯುವಕನ ಜೊತೆ ಇಂದು ಗುಳೇದಗುಡ್ಡದ ಯುವತಿ ಮದುವೆ ನಡೆಯಬೇಕಿತ್ತು. ಆದ್ರೆ, ಯುವಕನ ತಾಯಿಗೆ ಕೊರೊನಾ ಪಾಸಿಟಿವ್ ಇದೆ ಎನ್ನುವ ಮಾಹಿತಿ ಇದೆ. ಅಲ್ಲದೆ, ಬಳ್ಳಾರಿ ಆಸ್ಪತ್ರೆಯಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತ ಮಧುಮಗ ಹಾಗೂ ಸಂಬಂಧಿಕರು ಬಳ್ಳಾರಿಯಿಂದ ಬಸ್ ತೆಗೆದುಕೊಂಡು ಮದುವೆಗೆ ಗುಳೇದಗುಡ್ಡಕ್ಕೆ ಆಗಮಿಸಿದ್ದರು. ಈ ವಿಷಯ ತಿಳಿದು ರಾತ್ರಿಯೇ ಗುಳೇದಗುಡ್ಡ ತಾಲೂಕು ಆಡಳಿತ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮದುವೆಯನ್ನು ರದ್ದುಮಾಡಿಸಿ, ಬಂದವರನ್ನು ವಾಪಸ್ ಕಳುಹಿಸಿದ್ದಾರೆ.

ಗುಳೇದಗುಡ್ಡದ ಮರಡಿಮಠದ ಬಳಿ ಇರುವ ಹೆಣ್ಣಿನ ಮನೆಯ ಮುಂದೆ ಮದುವೆ ನಡೆಯಬೇಕಿತ್ತು. ಮದುವೆ ನಡೆಯಬೇಕಿದ್ದ ಆ ಪ್ರದೇಶವನ್ನು ಅಧಿಕಾರಿಗಳು ಸ್ಯಾನಿಟೈಸ್​ ಮಾಡಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಉಪವಿಭಾಗಾಧಿಕಾರಿ ಗಂಗಪ್ಪ ಸೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us