ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಯಲ್ಲೇ ನರಳುತ್ತಿದ್ದಾನೆ ಸೋಂಕಿತ, ಎಲ್ಲಿ?

ಹಾವೇರಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 50 ವರ್ಷದ ಸೋಂಕಿತನನ್ನ ಇದುವರೆಗೂ ಆಸ್ಪತ್ರೆಗೆ ಶಿಫ್ಟ್ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಸೋಂಕಿತ ಮನೆಯಲ್ಲಿ ನರಳುವ ಪರಿಸ್ಥಿತಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದ ನಿವಾಸಿಯಾದ 55 ವರ್ಷದ ಸೋಂಕಿತ ಜುಲೈ 16ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. ನಿನ್ನೆ ಮಧ್ಯಾಹ್ನ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ, ಆಸ್ಪತ್ರೆಗೆ ಶಿಫ್ಟ್ ಆಗೋಕೆ ಸೋಂಕಿತ ನಿನ್ನೆಯಿಂದ ಆಂಬುಲೆನ್ಸ್ […]

ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಯಲ್ಲೇ ನರಳುತ್ತಿದ್ದಾನೆ ಸೋಂಕಿತ, ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Jul 26, 2020 | 4:09 PM

ಹಾವೇರಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 50 ವರ್ಷದ ಸೋಂಕಿತನನ್ನ ಇದುವರೆಗೂ ಆಸ್ಪತ್ರೆಗೆ ಶಿಫ್ಟ್ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಸೋಂಕಿತ ಮನೆಯಲ್ಲಿ ನರಳುವ ಪರಿಸ್ಥಿತಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದ ನಿವಾಸಿಯಾದ 55 ವರ್ಷದ ಸೋಂಕಿತ ಜುಲೈ 16ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. ನಿನ್ನೆ ಮಧ್ಯಾಹ್ನ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೀಗಾಗಿ, ಆಸ್ಪತ್ರೆಗೆ ಶಿಫ್ಟ್ ಆಗೋಕೆ ಸೋಂಕಿತ ನಿನ್ನೆಯಿಂದ ಆಂಬುಲೆನ್ಸ್ ಗಾಗಿ ಕಾದು ಕುಳಿತಿದ್ದರು. ಆದರೆ, ಯಾವೊಬ್ಬ ಅಧಿಕಾರಿಯೂ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಸೋಂಕಿತ ಮನೆಯಲ್ಲಿಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆತನ ಸಂಬಂಧಿಕರು ಹಿಡಿಶಾಪ ಹಾಕುತ್ತಿದ್ದಾರೆ.

Published On - 11:20 am, Sun, 26 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us