AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ತಲೆ ಹೊಡೆದುಕೊಂಡು ಸತ್ತು ಹೋಗ್ತೀನಿ’ ಮಗನಿಗೆ ಕರೆ ಮಾಡಿ ಸೋಂಕಿತೆ ಅಳಲು

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ಎಡವಟ್ಟು ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಡೆಡ್ಲಿ ವೈರಸ್ ಅಟ್ಯಾಕ್ ಮಾಡ್ತಾ ಇದ್ರೂ ವ್ಯವಸ್ಥೆ ಬದಲಾಗಿಲ್ಲ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು ಯಮಯಾತನೆ ಪಡುತ್ತಿದ್ದಾರೆ. ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ನರಕದರ್ಶನ ಆಗ್ತಿದೆಯಂತೆ. ಸೋಂಕಿತೆಯೊನ್ನರು ಕಣ್ಣೀರು ಹಾಕಿಕೊಂಡು ತಮ್ಮ ಮಗನ ಬಳಿ ನೋವು ಹಂಚಿಕೊಂಡ ಕರುಣಾಜನಕ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಮತ್ತೆ ಕೊವಿಡ್ ಆಸ್ಪತ್ರೆ ಅವ್ಯವಸ್ಥೆ ಬಟಾಬಯಲಾಗಿದೆ. ವಿಕ್ಟೋರಿಯಾದಲ್ಲಿ ಕೊರೊನಾ ಸೋಂಕಿತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈಗಾಗಲೇ ವಿಕ್ಟೋರಿಯಾದಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಸೋಂಕಿತರು ಪರದಾಡುತ್ತಿರುವ ಬಗ್ಗೆ […]

'ನಾನು ತಲೆ ಹೊಡೆದುಕೊಂಡು ಸತ್ತು ಹೋಗ್ತೀನಿ' ಮಗನಿಗೆ ಕರೆ ಮಾಡಿ ಸೋಂಕಿತೆ ಅಳಲು
ಆಯೇಷಾ ಬಾನು
|

Updated on:Jul 02, 2020 | 11:25 AM

Share

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ಎಡವಟ್ಟು ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಡೆಡ್ಲಿ ವೈರಸ್ ಅಟ್ಯಾಕ್ ಮಾಡ್ತಾ ಇದ್ರೂ ವ್ಯವಸ್ಥೆ ಬದಲಾಗಿಲ್ಲ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು ಯಮಯಾತನೆ ಪಡುತ್ತಿದ್ದಾರೆ. ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ನರಕದರ್ಶನ ಆಗ್ತಿದೆಯಂತೆ. ಸೋಂಕಿತೆಯೊನ್ನರು ಕಣ್ಣೀರು ಹಾಕಿಕೊಂಡು ತಮ್ಮ ಮಗನ ಬಳಿ ನೋವು ಹಂಚಿಕೊಂಡ ಕರುಣಾಜನಕ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೆ ಕೊವಿಡ್ ಆಸ್ಪತ್ರೆ ಅವ್ಯವಸ್ಥೆ ಬಟಾಬಯಲಾಗಿದೆ. ವಿಕ್ಟೋರಿಯಾದಲ್ಲಿ ಕೊರೊನಾ ಸೋಂಕಿತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈಗಾಗಲೇ ವಿಕ್ಟೋರಿಯಾದಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಸೋಂಕಿತರು ಪರದಾಡುತ್ತಿರುವ ಬಗ್ಗೆ ವರದಿ ಮಾಡಲಾಗಿದೆ. ಆದರೆ ಅಲ್ಲಿನ ಅಡಳಿತ ಮಂಡಳಿ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ತಾಯಿಯ ಕಣ್ಣೀರ ಕಥೆ ಡಯಾಲಿಸಿಸ್​​ಗೆ ಅಂತ ಚಿಕಿತ್ಸೆಗೆ ಬಂದ ತುಮಕೂರು ಮೂಲದ ಮಹಿಳೆಗೆ ಕೊರೊನಾ ಅಟ್ಯಾಕ್ ಆಗಿದೆ. ಡಯಾಲಿಸಿಸ್​​​ ಇದ್ದ ಮಹಿಳೆಗೆ 4 ದಿನ ಕಳೆದ್ರೂ ಮಾತ್ರೆ ಕೊಟ್ಟಿಲ್ಲ. 4 ದಿನಗಳ ಬಳಿಕ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಕೊವಿಡ್ ಪರೀಕ್ಷೆ ಮಾಡಿದ್ದಾರೆ. ಆಗ ಬಂದ ವರದಿಯಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ.

ಸೋಂಕಿತೆ ತನ್ನ ಮಗನ ಬಳಿ ವಿಕ್ಟೋರಿಯಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲವೆಂದು ತಾಯಿ ಕಣ್ಣೀರು ಹಾಕಿದ್ದಾರೆ. ಮಗನಿಗೆ ದೂರವಾಣಿ ಕರೆ ಮಾಡಿ ನೋವು ತೋಡಿಕೊಂಡಿದ್ದಾರೆ. ನನ್ನ ಮೇಲೆ ಕೋಪಕ್ಕೆ ಇಲ್ಲಿ ತಂದು ಬಿಟ್ಟಿದ್ದೀಯಾ, ನಾನಿಲ್ಲಿ ಬದುಕಲ್ಲ.

ಕಳೆದ ನಾಲ್ಕು ದಿನಗಳಿಂದ ಒಂದೇ ಒಂದು ಮಾತ್ರೆ ಕೂಡ ಕೊಟ್ಟಿಲ್ಲ. ಕೇಳಿದ್ರೆ ಕಾಯಿಲೆ ತರಿಸಿಕೊಂಡು ಬಂದಿದ್ದೀಯಾ, ಸುಮ್ನೆ ಇರು ಅಂತಾರೆ. ನಾನು ಶೌಚಾಲಯಕ್ಕೆ ಹೋಗಿ ತಲೆ ಹೊಡೆದುಕೊಂಡು ಸತ್ತು ಹೋಗ್ತೀನಿ ಎಂದು ತುಮಕೂರು ಮೂಲದ 56 ವರ್ಷದ ಮಹಿಳೆ ಮಗನ ಬಳಿ ಕರುಣಾಜನಕ ಕಥೆಯನ್ನು ಹೇಳಿಕೊಂಡಿದ್ದಾರೆ. ನಮ್ಮ ತಾಯಿಗಾಗಿ ಇದ್ದ ಸೈಟ್​​ನ್ನು ಮಾರಿದ್ದೀನಿ ದಯವಿಟ್ಟು ಉಳಿಸಿಕೊಡಿ ಎಂದು ಮಗ ವೈದ್ಯರ ಬಳಿ ಮನವಿ ಮಾಡಿದ್ದಾರಂತೆ. ಆದ್ರೆ ಇಂತಹ ಪರಿಸ್ಥಿತಿ ಯಾರಿಗೂ ಬರ ಬಾರದು..

Published On - 10:27 am, Thu, 2 July 20

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ