AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ. ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ […]

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 23, 2020 | 12:38 PM

Share

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ.

ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ ಸೇತು ಆಪ್ ಮೂಲಕ ಪಾಸಿಟಿವ್ ರೋಗಿ ಬಗ್ಗೆ ನೆರೆ ಮನೆಯವರಿಗೆ ಮಾಹಿತಿ ಸಿಕ್ಕಿದೆ. ಕೊವಿಡ್ ಲಕ್ಷಣದ ವ್ಯಕ್ತಿ ಸಮೀಪವಿರುವುದಾಗಿ ಆಪ್ ಎಚ್ಚರಿಕೆ ನೀಡಿದೆ. ನೆರೆಮನೆಯವರು ಯುವಕನನ್ನ ವಿಚಾರಿಸಿ ಪರೀಕ್ಷೆಗೊಳಪಡಿಸಿದಾಗ ಆತನಿಗೆ ಪಾಸಿಟಿವ್ ಬಂದಿದೆ. ಈ ರೀತಿ ಆರೋಗ್ಯ ಸೇತು ಆಪ್​ನಿಂದ ಕೊರೊನಾ ಸೋಂಕಿತ ರೋಗಿ ಸಿಕ್ಕಿಬಿದ್ದಿದ್ದಾನೆ.

ಸೋಂಕಿತ ಮಂಗಳೂರಿನಲ್ಲಿ ಸ್ಥಳೀಯ ಮನೆಗಳಿಗೆ ತೆರಳಿ ಮೀನು ಮಾರಾಟ ಮಾಡ್ತಿದ್ದ. ಬಂದರಿಗೆ ತೆರಳಿ ಮೀನು ತರುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಆತನ ಜೊತೆ ಸಂಪರ್ಕವಿದ್ದವರ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!