AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರಿಗಿಲ್ಲವಂತೆ ಸರಿಯಾದ ಚಿಕಿತ್ಸೆ, ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ವಿರುದ್ಧ ಆರೋಪ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡರ ಆಸ್ಪತ್ರೆಯಲ್ಲೂ ರೋಗಿಗಳಿಗೆ ಪರದಾಟ ತಪ್ಪಿಲ್ಲ. ಬಿಬಿಎಂಪಿ ವತಿಯಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿರುವ ಕೊರೊನಾ ಸೋಂಕಿತರಿಗೆ ಸಂಕಷ್ಟ ಎದುರಿಸುವಂತಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಊಟದ ವ್ಯವಸ್ಥೆ ಇಲ್ಲವಂತೆ. ಬಿಪಿ, ಶುಗರ್ ಪರಿಶೀಲಿಸಲ್ಲ, ಅರ್ಧ ಮಾತ್ರೆ ಕೊಡುತ್ತಾರೆ. ಅರ್ಧ ಮಾತ್ರೆ ಕೊಟ್ಟ ಬಳಿಕ ರೋಗಿಗಳನ್ನ ವಿಚಾರಿಸುವುದಿಲ್ಲ. […]

ಸೋಂಕಿತರಿಗಿಲ್ಲವಂತೆ ಸರಿಯಾದ ಚಿಕಿತ್ಸೆ, ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ವಿರುದ್ಧ ಆರೋಪ
ಆಯೇಷಾ ಬಾನು
|

Updated on:Aug 27, 2020 | 7:58 AM

Share

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡರ ಆಸ್ಪತ್ರೆಯಲ್ಲೂ ರೋಗಿಗಳಿಗೆ ಪರದಾಟ ತಪ್ಪಿಲ್ಲ. ಬಿಬಿಎಂಪಿ ವತಿಯಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿರುವ ಕೊರೊನಾ ಸೋಂಕಿತರಿಗೆ ಸಂಕಷ್ಟ ಎದುರಿಸುವಂತಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಊಟದ ವ್ಯವಸ್ಥೆ ಇಲ್ಲವಂತೆ. ಬಿಪಿ, ಶುಗರ್ ಪರಿಶೀಲಿಸಲ್ಲ, ಅರ್ಧ ಮಾತ್ರೆ ಕೊಡುತ್ತಾರೆ. ಅರ್ಧ ಮಾತ್ರೆ ಕೊಟ್ಟ ಬಳಿಕ ರೋಗಿಗಳನ್ನ ವಿಚಾರಿಸುವುದಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದರೆ 3 ದಿನಕ್ಕೆ ಡಿಸ್ಚಾರ್ಜ್ ಮಾಡುತ್ತಾರೆ.

ಮಕ್ಕಳಿಗಂತೂ ಸರಿಯಾದ ಊಟದ ವ್ಯವಸ್ಥೆಯೇ ಇಲ್ಲ. ಮಧುಮೇಹಿಗಳಿಗೆ ಚಪಾತಿ ನೀಡಲು ಕೇಳಿದರೂ ಕೊಡುತ್ತಿಲ್ಲ. ಇದರಿಂದಾಗಿ ಮತ್ತಷ್ಟು ಶುಗರ್ ಲೆವೆಲ್ ಹೆಚ್ಚಾಗಿ ಸಂಕಷ್ಟ ಎದುರಿಸುವಂತಾಗಿದೆ. ಹೀಗೆ ಆದರೆ ಗುಣಮುಖರಾಗುವುದು ಹೇಗೆಂದು ರೋಗಿಗಳು ಅಳಲು ತೋಡಿಕೊಂಡಿದ್ದಾರೆ.

ಸರ್ಕಾರ ಹಣ ಪಾವತಿಸುತ್ತಿದ್ದರೂ ಕಾಟಾಚಾರಕ್ಕೆ ನೋಡ್ತಾರೆ. ಸರ್ಕಾರದಿಂದ ಒಬ್ಬ ರೋಗಿಗೆ ಇಂತಿಷ್ಟು ಹಣ ನೀಡುತ್ತಾರೆ. ಆದ್ರೆ ಕನಿಷ್ಠ ಮೂಲಸೌಕರ್ಯಗಳನ್ನೂ ನೀಡ್ತಿಲ್ಲ ಎಂದು ಖಾಸಗಿ ಆಸ್ಪತ್ರೆಯ ವಿರುದ್ಧ ಬಿಬಿಎಂಪಿ ಕಡೆಯಿಂದ ಬಂದಿರುವ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

Published On - 7:57 am, Thu, 27 August 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!