ರಾಜಧಾನಿಯಲ್ಲಿ ಕೊರೊನಾಗೆ ಮತ್ತೊಬ್ಬರು ಬಲಿ

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 2519ನೇ ಸೋಂಕಿತರಾಗಿದ್ದ ಅಗ್ರಹಾರ ದಾಸರಹಳ್ಳಿಯ ನಿವಾಸಿ 61 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ವೃದ್ಧೆಗೆ ಮೇ 28ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೊಂದು ಕೊರೊನಾ ಶಂಕಿತೆ ಸಾವು: ಬೆಂಗಳೂರು ನಗರದಲ್ಲಿ ಮತ್ತೊಂದು ಕೊರೊನಾ ಶಂಕಿತೆ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಹಾಲಕ್ಷ್ಮೀ ಲೇಔಟ್‌ನ 85 […]

ರಾಜಧಾನಿಯಲ್ಲಿ ಕೊರೊನಾಗೆ ಮತ್ತೊಬ್ಬರು ಬಲಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 07, 2020 | 3:43 PM

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 2519ನೇ ಸೋಂಕಿತರಾಗಿದ್ದ ಅಗ್ರಹಾರ ದಾಸರಹಳ್ಳಿಯ ನಿವಾಸಿ 61 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ.

ವೃದ್ಧೆಗೆ ಮೇ 28ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮತ್ತೊಂದು ಕೊರೊನಾ ಶಂಕಿತೆ ಸಾವು:
ಬೆಂಗಳೂರು ನಗರದಲ್ಲಿ ಮತ್ತೊಂದು ಕೊರೊನಾ ಶಂಕಿತೆ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಹಾಲಕ್ಷ್ಮೀ ಲೇಔಟ್‌ನ 85 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ಮೃತಪಟ್ಟ ನಂತರ ವೈದ್ಯರು ಕೊರೊನಾ ಟೆಸ್ಟ್‌ ಮಾಡಿದ್ದರು.

ಆದ್ರೆ ವರದಿ ಬರುವ ಮುನ್ನವೇ ಅಂತ್ಯಸಂಸ್ಕಾರ ಮಾಡಲಾಗಿತ್ತು. ಇದೀಗ ರಿಪೋರ್ಟ್‌ ಬಂದಿದ್ದು ಕೊರೊನಾ ಸೋಂಕಿನ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಕುಟುಂಬಸ್ಥರಿಗೆ ಆತಂಕ ಶುರುವಾಗಿದೆ.

Published On - 2:08 pm, Sun, 7 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us