AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರಿಗೆ ಆಸ್ಪತ್ರೆಯಲ್ಲಿ ಯುದ್ಧವಾದ್ರೆ, ಕುಟುಂಬಸ್ಥರಿಗೆ ಗ್ರಾಮದಲ್ಲಿ ಅಗ್ನಿ ಪರೀಕ್ಷೆ

ಹಾಸನ: ಕೊರೊನಾ ಕೇವಲ ಸೋಂಕಿತರಿಗೆ ಹಿಂಸೆ ಕೊಡದೇ ಕುಟುಂಬಸ್ಥರಿಗೂ ನೋವನ್ನುಂಟು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮಗ, ಹೆಂಡತಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಏರಿಯಾದ ಜನ ನಿಂದಿಸುತ್ತಿದ್ದಾರೆ ಎಂದು ತಂದೆ ನೇಣಿಗೆ ಶರಣಾದ ಘಟನೆ ನಡೆದಿತ್ತು. ಈಗ ಅದೇ ಮಾದರಿ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದವರ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಕುಟುಂಬಸ್ಥರು ಮಾನಸಿಕ ಯಾತನೆ ಅನುಭವಿಸುತ್ತಿದ್ದಾರೆ. ಹಾಸನ‌ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರ ಸೋಂಕಿತನ ಕುಟುಂಬಸ್ಥರು ಪಡುತ್ತಿರುವ ನೋವಿನ ವಿಡಿಯೋ ವೈರಲ್ […]

ಸೋಂಕಿತರಿಗೆ ಆಸ್ಪತ್ರೆಯಲ್ಲಿ ಯುದ್ಧವಾದ್ರೆ, ಕುಟುಂಬಸ್ಥರಿಗೆ ಗ್ರಾಮದಲ್ಲಿ ಅಗ್ನಿ ಪರೀಕ್ಷೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 9:11 AM

Share

ಹಾಸನ: ಕೊರೊನಾ ಕೇವಲ ಸೋಂಕಿತರಿಗೆ ಹಿಂಸೆ ಕೊಡದೇ ಕುಟುಂಬಸ್ಥರಿಗೂ ನೋವನ್ನುಂಟು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮಗ, ಹೆಂಡತಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಏರಿಯಾದ ಜನ ನಿಂದಿಸುತ್ತಿದ್ದಾರೆ ಎಂದು ತಂದೆ ನೇಣಿಗೆ ಶರಣಾದ ಘಟನೆ ನಡೆದಿತ್ತು. ಈಗ ಅದೇ ಮಾದರಿ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದವರ ಕುಟುಂಬಸ್ಥರು ಪರದಾಡುತ್ತಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಕುಟುಂಬಸ್ಥರು ಮಾನಸಿಕ ಯಾತನೆ ಅನುಭವಿಸುತ್ತಿದ್ದಾರೆ. ಹಾಸನ‌ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರ ಸೋಂಕಿತನ ಕುಟುಂಬಸ್ಥರು ಪಡುತ್ತಿರುವ ನೋವಿನ ವಿಡಿಯೋ ವೈರಲ್ ಆಗಿದೆ.

ಸೋಂಕಿತನ ತಂದೆಗೆ ಗ್ರಾಮಸ್ಥರಿಂದ ನಿಂದನೆ ಪರೀಕ್ಷೆ ನಡೆಸಿ ವಾರದ ಬಳಿಕ ಯುವಕನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತರ ಯುವಕ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ರು. ಸೋಂಕಿತ ಆಸ್ಪತ್ರೆಗೆ ಸೇರುತ್ತಲೆ ಗ್ರಾಮದಲ್ಲಿ ಅವರ ಕುಟುಂಬ ಸದಸ್ಯರಿಗೆ ನಿಂದನೆ ಆರೋಪ ಹೆಚ್ಚಾಗಿದೆ.ದನ ಕರುಗಳಿಗೆ ಮೇವು ತರಲೂ ಆಗದೆ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಅಗತ್ಯ ವಸ್ತುಗಳು ಸಿಗದೆ‌ ಮನೆಯವರಿಗೆ ತೊಂದರಯಾಗಿದೆ. ಅಧಿಕಾರಿಗಳು ಕೇವಲ ಸೋಂಕಿತರ ಮನೆ ಅಥವಾ ಬೀದಿ ಸೀಲ್​ಡೌನ್ ಮಾಡಿ‌ ಕೈತೊಳೆದುಕೊಳ್ತಿದ್ದಾರೆ. ಆದ್ರೆ ಅಲ್ಲಿನ ಜನರ ಅಗತ್ಯ ವಸ್ತು ಪೂರೈಕೆ ಬಗ್ಗೆ ನಿರ್ಲಕ್ಷ್ಯವಹಿಸಲಾಗುತ್ತಿದೆ. ಸೋಂಕಿತನ ಕುಟುಂಬಸ್ಥರು ಓಡಾಡಿದ್ರೆ ಜನ ನಿಂದಿಸುತ್ತಿದ್ದಾರೆ. ಮನಸ್ಸಿಗೆ ನೋವಾಗುವಂತೆ ವರ್ತಿಸುತ್ತಿದ್ದಾರೆ.

ನೀವು ನಮಗೆ ಸಹಾಯ ಮಾಡದೇ ಹೋದ್ರೂ ಪರವಾಗಿಲ್ಲ ತೊಂದರೆ ಕೊಡಬೇಡಿ. ನನ್ನ ವರದಿ ತಡವಾಗಲು ಸರ್ಕಾರ ಕಾರಣ. ಜನರು ಪ್ರಶ್ನೆ ಮಾಡೊ ಹಾಗಿದ್ರೆ ಸರ್ಕಾರವನ್ನ ಪ್ರಶ್ನೆ ಮಾಡಿ. ನಮಗ್ಯಾಕೆ ನೋವು ಕೊಡ್ತೀರ ಎಂದು ಹಾಸನದ ಕೋವಿಡ್ ಆಸ್ಪತ್ರೆಯಿಂದ ಸೋಂಕಿತ ಯುವಕ ವಿಡಿಯೋ ಮಾಡಿ ನೋವು ಹೇಳಿಕೊಂಡಿದ್ದಾನೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ