AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರಿಗೆ ಆಸ್ಪತ್ರೆಯಲ್ಲಿ ಯುದ್ಧವಾದ್ರೆ, ಕುಟುಂಬಸ್ಥರಿಗೆ ಗ್ರಾಮದಲ್ಲಿ ಅಗ್ನಿ ಪರೀಕ್ಷೆ

ಹಾಸನ: ಕೊರೊನಾ ಕೇವಲ ಸೋಂಕಿತರಿಗೆ ಹಿಂಸೆ ಕೊಡದೇ ಕುಟುಂಬಸ್ಥರಿಗೂ ನೋವನ್ನುಂಟು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮಗ, ಹೆಂಡತಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಏರಿಯಾದ ಜನ ನಿಂದಿಸುತ್ತಿದ್ದಾರೆ ಎಂದು ತಂದೆ ನೇಣಿಗೆ ಶರಣಾದ ಘಟನೆ ನಡೆದಿತ್ತು. ಈಗ ಅದೇ ಮಾದರಿ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದವರ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಕುಟುಂಬಸ್ಥರು ಮಾನಸಿಕ ಯಾತನೆ ಅನುಭವಿಸುತ್ತಿದ್ದಾರೆ. ಹಾಸನ‌ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರ ಸೋಂಕಿತನ ಕುಟುಂಬಸ್ಥರು ಪಡುತ್ತಿರುವ ನೋವಿನ ವಿಡಿಯೋ ವೈರಲ್ […]

ಸೋಂಕಿತರಿಗೆ ಆಸ್ಪತ್ರೆಯಲ್ಲಿ ಯುದ್ಧವಾದ್ರೆ, ಕುಟುಂಬಸ್ಥರಿಗೆ ಗ್ರಾಮದಲ್ಲಿ ಅಗ್ನಿ ಪರೀಕ್ಷೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 9:11 AM

Share

ಹಾಸನ: ಕೊರೊನಾ ಕೇವಲ ಸೋಂಕಿತರಿಗೆ ಹಿಂಸೆ ಕೊಡದೇ ಕುಟುಂಬಸ್ಥರಿಗೂ ನೋವನ್ನುಂಟು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮಗ, ಹೆಂಡತಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಏರಿಯಾದ ಜನ ನಿಂದಿಸುತ್ತಿದ್ದಾರೆ ಎಂದು ತಂದೆ ನೇಣಿಗೆ ಶರಣಾದ ಘಟನೆ ನಡೆದಿತ್ತು. ಈಗ ಅದೇ ಮಾದರಿ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದವರ ಕುಟುಂಬಸ್ಥರು ಪರದಾಡುತ್ತಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಕುಟುಂಬಸ್ಥರು ಮಾನಸಿಕ ಯಾತನೆ ಅನುಭವಿಸುತ್ತಿದ್ದಾರೆ. ಹಾಸನ‌ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರ ಸೋಂಕಿತನ ಕುಟುಂಬಸ್ಥರು ಪಡುತ್ತಿರುವ ನೋವಿನ ವಿಡಿಯೋ ವೈರಲ್ ಆಗಿದೆ.

ಸೋಂಕಿತನ ತಂದೆಗೆ ಗ್ರಾಮಸ್ಥರಿಂದ ನಿಂದನೆ ಪರೀಕ್ಷೆ ನಡೆಸಿ ವಾರದ ಬಳಿಕ ಯುವಕನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತರ ಯುವಕ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ರು. ಸೋಂಕಿತ ಆಸ್ಪತ್ರೆಗೆ ಸೇರುತ್ತಲೆ ಗ್ರಾಮದಲ್ಲಿ ಅವರ ಕುಟುಂಬ ಸದಸ್ಯರಿಗೆ ನಿಂದನೆ ಆರೋಪ ಹೆಚ್ಚಾಗಿದೆ.ದನ ಕರುಗಳಿಗೆ ಮೇವು ತರಲೂ ಆಗದೆ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಅಗತ್ಯ ವಸ್ತುಗಳು ಸಿಗದೆ‌ ಮನೆಯವರಿಗೆ ತೊಂದರಯಾಗಿದೆ. ಅಧಿಕಾರಿಗಳು ಕೇವಲ ಸೋಂಕಿತರ ಮನೆ ಅಥವಾ ಬೀದಿ ಸೀಲ್​ಡೌನ್ ಮಾಡಿ‌ ಕೈತೊಳೆದುಕೊಳ್ತಿದ್ದಾರೆ. ಆದ್ರೆ ಅಲ್ಲಿನ ಜನರ ಅಗತ್ಯ ವಸ್ತು ಪೂರೈಕೆ ಬಗ್ಗೆ ನಿರ್ಲಕ್ಷ್ಯವಹಿಸಲಾಗುತ್ತಿದೆ. ಸೋಂಕಿತನ ಕುಟುಂಬಸ್ಥರು ಓಡಾಡಿದ್ರೆ ಜನ ನಿಂದಿಸುತ್ತಿದ್ದಾರೆ. ಮನಸ್ಸಿಗೆ ನೋವಾಗುವಂತೆ ವರ್ತಿಸುತ್ತಿದ್ದಾರೆ.

ನೀವು ನಮಗೆ ಸಹಾಯ ಮಾಡದೇ ಹೋದ್ರೂ ಪರವಾಗಿಲ್ಲ ತೊಂದರೆ ಕೊಡಬೇಡಿ. ನನ್ನ ವರದಿ ತಡವಾಗಲು ಸರ್ಕಾರ ಕಾರಣ. ಜನರು ಪ್ರಶ್ನೆ ಮಾಡೊ ಹಾಗಿದ್ರೆ ಸರ್ಕಾರವನ್ನ ಪ್ರಶ್ನೆ ಮಾಡಿ. ನಮಗ್ಯಾಕೆ ನೋವು ಕೊಡ್ತೀರ ಎಂದು ಹಾಸನದ ಕೋವಿಡ್ ಆಸ್ಪತ್ರೆಯಿಂದ ಸೋಂಕಿತ ಯುವಕ ವಿಡಿಯೋ ಮಾಡಿ ನೋವು ಹೇಳಿಕೊಂಡಿದ್ದಾನೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ