AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ. ಅಧಿಕಾರಿಗಳ ಈ […]

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್
Guru
| Edited By: |

Updated on:Jul 03, 2020 | 8:01 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ಸ್ಥಳೀಯರು ಗರಂ‌ ಆಗಿದ್ದಾರೆ. ಮಾನವೀಯತೆಯನ್ನೇ ಮರೆತಿರುವ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಹನುಮಂತನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಬೆಂಗಳೂರು ಕೂಡಾ ಮುಂಬೈ, ದೆಹಲಿಯಂತಾಗುತ್ತಿದೆಯಾ ಅನ್ನೋ ಅನುಮಾನಗಳು ಮೂಡುತ್ತಿವೆ.

Published On - 7:57 pm, Fri, 3 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್