AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ. ಅಧಿಕಾರಿಗಳ ಈ […]

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್
Guru
| Edited By: |

Updated on:Jul 03, 2020 | 8:01 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ಸ್ಥಳೀಯರು ಗರಂ‌ ಆಗಿದ್ದಾರೆ. ಮಾನವೀಯತೆಯನ್ನೇ ಮರೆತಿರುವ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಹನುಮಂತನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಬೆಂಗಳೂರು ಕೂಡಾ ಮುಂಬೈ, ದೆಹಲಿಯಂತಾಗುತ್ತಿದೆಯಾ ಅನ್ನೋ ಅನುಮಾನಗಳು ಮೂಡುತ್ತಿವೆ.

Published On - 7:57 pm, Fri, 3 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!