AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಲಿ ಎಚ್ಚರಿಕೆ.. ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಗಿಫ್ಟ್ ಗ್ಯಾರಂಟಿ!

ಚಿಕ್ಕಬಳ್ಳಾಪುರ: ಬಟ್ಟೆ ಖರೀದಿಯಿಂದ ಹಿಡಿದು ಹಾರ್ಡವೇರ್ ಸಾಫ್ಟ್​ವೇರ್ ಮೋಜು ಮಸ್ತಿ ಅಂತಾ ರಾಜಧಾನಿ ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಸೋಂಕು ಇನ್ನಿಲ್ಲದಂತೆ ಬಳುವಳಿಯಾಗಿ ಬರ್ತಿದೆ, ಹುಷಾರು! ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬರ್ತಿರುವ ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ತನಿಖೆ ನಡೆಸಿದ್ರೆ.. ಬಹುತೇಕ ಎಲ್ಲಾ ಪ್ರಕರಣಗಳು ಸಹ ಬೆಂಗಳೂರು ಮಹಾನಗರಕ್ಕೆ ನಂಟು ಹೊಂದಿವೆ! ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅಂತ ಆರ್ಥಿಕವಾಗಿ ಚೆನ್ನಾಗಿರುವ ಕೆಲವರು, ಆಸ್ಪತ್ರೆಗಳಿಗೆ ಹೋಗಿ ಬಂದಿದ್ದೆ […]

ಇರಲಿ ಎಚ್ಚರಿಕೆ.. ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಗಿಫ್ಟ್ ಗ್ಯಾರಂಟಿ!
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ.ಆರ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 2:48 PM

Share

ಚಿಕ್ಕಬಳ್ಳಾಪುರ: ಬಟ್ಟೆ ಖರೀದಿಯಿಂದ ಹಿಡಿದು ಹಾರ್ಡವೇರ್ ಸಾಫ್ಟ್​ವೇರ್ ಮೋಜು ಮಸ್ತಿ ಅಂತಾ ರಾಜಧಾನಿ ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಸೋಂಕು ಇನ್ನಿಲ್ಲದಂತೆ ಬಳುವಳಿಯಾಗಿ ಬರ್ತಿದೆ, ಹುಷಾರು! ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬರ್ತಿರುವ ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ತನಿಖೆ ನಡೆಸಿದ್ರೆ.. ಬಹುತೇಕ ಎಲ್ಲಾ ಪ್ರಕರಣಗಳು ಸಹ ಬೆಂಗಳೂರು ಮಹಾನಗರಕ್ಕೆ ನಂಟು ಹೊಂದಿವೆ!

ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅಂತ ಆರ್ಥಿಕವಾಗಿ ಚೆನ್ನಾಗಿರುವ ಕೆಲವರು, ಆಸ್ಪತ್ರೆಗಳಿಗೆ ಹೋಗಿ ಬಂದಿದ್ದೆ ತಡ ಅಲ್ಲಿಂದಲೂ ಕೊರೊನಾ ವಕ್ಕರಿಸಿದೆ. ಇನ್ನು ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ 10 ಜನರಲ್ಲಿ 8 ಜನ ಬೆಂಗಳೂರಿನ ಕೊರೊನಾ ನಂಜು ತಗುಲಿಸಿಕೊಂಡೆ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲಾಧಿಕಾರಿ ಲತಾ ಕಳಕಳಿ ಈ ಕುರಿತು ಟಿವಿ9 ಗೆ ಮಾಹಿತಿ ನೀಡಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್, ಕೊರೊನಾ ಸೋಂಕಿಗೆ ಬಲಿಯಾದವರಲ್ಲಿ ನಾಲ್ಕು ಜನ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆಂದು ಬೆಂಗಳೂರಿನ ಆಸ್ಪತ್ರಗೆ ಹೋಗಿ ಬಂದಿದ್ರು. ಅವರಿಗೆ ಅಲ್ಲೇ ಕೊರೊನಾ ಸೋಂಕು ತಗುಲಿತ್ತು. ಇನ್ನೂ ಒಂದು ಪ್ರಕರಣದಲ್ಲಿ ವ್ಯಕ್ತಿಯೊರ್ವ ಬೈಕ್ ಅಪಘಾತಕ್ಕೀಡಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಂಕು ತಗುಲಿ ಮೃತಪಟ್ಟಿದ್ರು.

ಸ್ವಲ್ಪ ದಿನ ಬೆಂಗಳೂರಿನಿಂದ ದೂರ ಇರುವುದೇ ಕ್ಷೇಮ ಮತ್ತೊಬ್ಬರು ಬೆಂಗಳೂರಿನಲ್ಲಿ ಕೊರೊನಾ ಅಂಟಿಸಿಕೊಂಡು ಬಂದು ಮಗಳ ಮನೆಯಲ್ಲಿ ಇದ್ರೂ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ. ದಿನೇ ದಿನೇ ಬೆಂಗಳೂರಿನ ಕೊರೊನಾ ನಂಜು ಹೆಚ್ಚಾಗುತ್ತಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದೆ. ಭವನದ ಗೇಟ್ ಬಳಿಯೆ ವಿವಿಧ ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ದೂರು ದುಮ್ಮಾನ ಅರ್ಜಿಗಳನ್ನು ಗೇಟ್ ಬಳಿಯೆ ಸ್ವೀಕಾರ ಮಾಡಿ ನಂತರ ಅಧಿಕಾರಿಗಳಿಗೆ ತಲುಪಿಸುತ್ತಿದ್ದಾರೆ.

ಮತ್ತೊಂದೆಡೆ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ 63 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆದಿದ್ದು, 10 ಸಾವಿರ ಬೆಡ್ ವ್ಯವಸ್ಥೆ ಮಾಡಿದೆ. ರೋಗ ಲಕ್ಷಣಗಳು ಇಲ್ಲದವರನ್ನೂ ಕೋವಿಡ್ ಕೇರ್ ಗೆ ದಾಖಲಿಸುವ ಚಿಂತನೆಯಲ್ಲಿದೆ. ಇನ್ನು, 150 ಬೆಡ್ ಗಳ ಜಿಲ್ಲಾ ಕೋವಿಡ್ ಆಸ್ಪತ್ರೆಯಿದ್ದು ಪ್ರತ್ಯೇಕವಾಗಿ 50 ಬೆಡ್ ಗಳ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಗುರುತಿಸಲಾಗಿದೆ. ಯಾವುದಕ್ಕೂ ಸುಖಾಸುಮ್ಮನೆ ಬೆಂಗಳೂರಿಗೆ ಹೋಗಿ ಕೊರೊನಾ ತಗುಲಿಸಿಕೊಂಡು ಬರಬೇಡಿ. ಅದರ ಬದಲು ಸ್ವಲ್ಪ ದಿನ ಬೆಂಗಳೂರಿನಿಂದ ದೂರ ಇರುವುದೇ ಒಳ್ಳೆಯದು. -ಭೀಮಪ್ಪ ಪಾಟೀಲ

Published On - 12:01 pm, Fri, 10 July 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ