AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಲಿ ಎಚ್ಚರಿಕೆ.. ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಗಿಫ್ಟ್ ಗ್ಯಾರಂಟಿ!

ಚಿಕ್ಕಬಳ್ಳಾಪುರ: ಬಟ್ಟೆ ಖರೀದಿಯಿಂದ ಹಿಡಿದು ಹಾರ್ಡವೇರ್ ಸಾಫ್ಟ್​ವೇರ್ ಮೋಜು ಮಸ್ತಿ ಅಂತಾ ರಾಜಧಾನಿ ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಸೋಂಕು ಇನ್ನಿಲ್ಲದಂತೆ ಬಳುವಳಿಯಾಗಿ ಬರ್ತಿದೆ, ಹುಷಾರು! ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬರ್ತಿರುವ ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ತನಿಖೆ ನಡೆಸಿದ್ರೆ.. ಬಹುತೇಕ ಎಲ್ಲಾ ಪ್ರಕರಣಗಳು ಸಹ ಬೆಂಗಳೂರು ಮಹಾನಗರಕ್ಕೆ ನಂಟು ಹೊಂದಿವೆ! ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅಂತ ಆರ್ಥಿಕವಾಗಿ ಚೆನ್ನಾಗಿರುವ ಕೆಲವರು, ಆಸ್ಪತ್ರೆಗಳಿಗೆ ಹೋಗಿ ಬಂದಿದ್ದೆ […]

ಇರಲಿ ಎಚ್ಚರಿಕೆ.. ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಗಿಫ್ಟ್ ಗ್ಯಾರಂಟಿ!
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ.ಆರ್
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 2:48 PM

Share

ಚಿಕ್ಕಬಳ್ಳಾಪುರ: ಬಟ್ಟೆ ಖರೀದಿಯಿಂದ ಹಿಡಿದು ಹಾರ್ಡವೇರ್ ಸಾಫ್ಟ್​ವೇರ್ ಮೋಜು ಮಸ್ತಿ ಅಂತಾ ರಾಜಧಾನಿ ಬೆಂಗಳೂರಿಗೆ ಹೋಗಿ ಬಂದ್ರೆ ಕೊರೊನಾ ಸೋಂಕು ಇನ್ನಿಲ್ಲದಂತೆ ಬಳುವಳಿಯಾಗಿ ಬರ್ತಿದೆ, ಹುಷಾರು! ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬರ್ತಿರುವ ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ತನಿಖೆ ನಡೆಸಿದ್ರೆ.. ಬಹುತೇಕ ಎಲ್ಲಾ ಪ್ರಕರಣಗಳು ಸಹ ಬೆಂಗಳೂರು ಮಹಾನಗರಕ್ಕೆ ನಂಟು ಹೊಂದಿವೆ!

ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅಂತ ಆರ್ಥಿಕವಾಗಿ ಚೆನ್ನಾಗಿರುವ ಕೆಲವರು, ಆಸ್ಪತ್ರೆಗಳಿಗೆ ಹೋಗಿ ಬಂದಿದ್ದೆ ತಡ ಅಲ್ಲಿಂದಲೂ ಕೊರೊನಾ ವಕ್ಕರಿಸಿದೆ. ಇನ್ನು ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ 10 ಜನರಲ್ಲಿ 8 ಜನ ಬೆಂಗಳೂರಿನ ಕೊರೊನಾ ನಂಜು ತಗುಲಿಸಿಕೊಂಡೆ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲಾಧಿಕಾರಿ ಲತಾ ಕಳಕಳಿ ಈ ಕುರಿತು ಟಿವಿ9 ಗೆ ಮಾಹಿತಿ ನೀಡಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್, ಕೊರೊನಾ ಸೋಂಕಿಗೆ ಬಲಿಯಾದವರಲ್ಲಿ ನಾಲ್ಕು ಜನ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆಂದು ಬೆಂಗಳೂರಿನ ಆಸ್ಪತ್ರಗೆ ಹೋಗಿ ಬಂದಿದ್ರು. ಅವರಿಗೆ ಅಲ್ಲೇ ಕೊರೊನಾ ಸೋಂಕು ತಗುಲಿತ್ತು. ಇನ್ನೂ ಒಂದು ಪ್ರಕರಣದಲ್ಲಿ ವ್ಯಕ್ತಿಯೊರ್ವ ಬೈಕ್ ಅಪಘಾತಕ್ಕೀಡಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಂಕು ತಗುಲಿ ಮೃತಪಟ್ಟಿದ್ರು.

ಸ್ವಲ್ಪ ದಿನ ಬೆಂಗಳೂರಿನಿಂದ ದೂರ ಇರುವುದೇ ಕ್ಷೇಮ ಮತ್ತೊಬ್ಬರು ಬೆಂಗಳೂರಿನಲ್ಲಿ ಕೊರೊನಾ ಅಂಟಿಸಿಕೊಂಡು ಬಂದು ಮಗಳ ಮನೆಯಲ್ಲಿ ಇದ್ರೂ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ. ದಿನೇ ದಿನೇ ಬೆಂಗಳೂರಿನ ಕೊರೊನಾ ನಂಜು ಹೆಚ್ಚಾಗುತ್ತಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದೆ. ಭವನದ ಗೇಟ್ ಬಳಿಯೆ ವಿವಿಧ ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ದೂರು ದುಮ್ಮಾನ ಅರ್ಜಿಗಳನ್ನು ಗೇಟ್ ಬಳಿಯೆ ಸ್ವೀಕಾರ ಮಾಡಿ ನಂತರ ಅಧಿಕಾರಿಗಳಿಗೆ ತಲುಪಿಸುತ್ತಿದ್ದಾರೆ.

ಮತ್ತೊಂದೆಡೆ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ 63 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆದಿದ್ದು, 10 ಸಾವಿರ ಬೆಡ್ ವ್ಯವಸ್ಥೆ ಮಾಡಿದೆ. ರೋಗ ಲಕ್ಷಣಗಳು ಇಲ್ಲದವರನ್ನೂ ಕೋವಿಡ್ ಕೇರ್ ಗೆ ದಾಖಲಿಸುವ ಚಿಂತನೆಯಲ್ಲಿದೆ. ಇನ್ನು, 150 ಬೆಡ್ ಗಳ ಜಿಲ್ಲಾ ಕೋವಿಡ್ ಆಸ್ಪತ್ರೆಯಿದ್ದು ಪ್ರತ್ಯೇಕವಾಗಿ 50 ಬೆಡ್ ಗಳ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಗುರುತಿಸಲಾಗಿದೆ. ಯಾವುದಕ್ಕೂ ಸುಖಾಸುಮ್ಮನೆ ಬೆಂಗಳೂರಿಗೆ ಹೋಗಿ ಕೊರೊನಾ ತಗುಲಿಸಿಕೊಂಡು ಬರಬೇಡಿ. ಅದರ ಬದಲು ಸ್ವಲ್ಪ ದಿನ ಬೆಂಗಳೂರಿನಿಂದ ದೂರ ಇರುವುದೇ ಒಳ್ಳೆಯದು. -ಭೀಮಪ್ಪ ಪಾಟೀಲ

Published On - 12:01 pm, Fri, 10 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ