AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ವೈರಸ್ ದಾಳಿಗೆ ಕರುನಾಡು ವಿಲವಿಲ, ಬೆಣ್ಣೆನಗರಿಯಲ್ಲಿ ಸೋಂಕಿಗೆ ಮೊದಲ ಬಲಿ!

ದಾವಣಗೆರೆ: ಕಂಡ ಕಂಡವರ ದೇಹ ಹೊಕ್ಕುತ್ತಾ.. ಅಮಾಯಕರ ಪ್ರಾಣ ತೆಗೆದು ರಣಕೇಕೆ ಹಾಕುತ್ತಿರೋ ಕೊರೊನಾ ಆರ್ಭಟಕ್ಕೆ ರಾಜ್ಯದಲ್ಲಿ ಕಮ್ಮಿಯಾಗೋ ಲಕ್ಷಣವೇ ಕಾಣುತ್ತಿಲ್ಲ. ರಕ್ಕಸ ವೃರಸ್ ಕುಣಿತಕ್ಕೆ ಕರುನಾಡಿಗೆ ಕರುನಾಡೇ ನಲುಗಿ ಹೋಗಿದೆ. ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 556ನೇ ಸೋಂಕಿತ 69 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ಇದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ ಬೆಣ್ಣೆನಗರಿಯಲ್ಲಿ ಮೊದಲ ಬಲಿ..! ನಿನ್ನೆ ಮೃತಪಟ್ಟ ವೃದ್ಧನಿಗೆ ಮೊನ್ನೆ […]

ಡೆಡ್ಲಿ ವೈರಸ್ ದಾಳಿಗೆ ಕರುನಾಡು ವಿಲವಿಲ, ಬೆಣ್ಣೆನಗರಿಯಲ್ಲಿ ಸೋಂಕಿಗೆ ಮೊದಲ ಬಲಿ!
ಸಾಧು ಶ್ರೀನಾಥ್​
|

Updated on: May 02, 2020 | 7:27 AM

Share

ದಾವಣಗೆರೆ: ಕಂಡ ಕಂಡವರ ದೇಹ ಹೊಕ್ಕುತ್ತಾ.. ಅಮಾಯಕರ ಪ್ರಾಣ ತೆಗೆದು ರಣಕೇಕೆ ಹಾಕುತ್ತಿರೋ ಕೊರೊನಾ ಆರ್ಭಟಕ್ಕೆ ರಾಜ್ಯದಲ್ಲಿ ಕಮ್ಮಿಯಾಗೋ ಲಕ್ಷಣವೇ ಕಾಣುತ್ತಿಲ್ಲ. ರಕ್ಕಸ ವೃರಸ್ ಕುಣಿತಕ್ಕೆ ಕರುನಾಡಿಗೆ ಕರುನಾಡೇ ನಲುಗಿ ಹೋಗಿದೆ.

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 556ನೇ ಸೋಂಕಿತ 69 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ಇದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ

ಬೆಣ್ಣೆನಗರಿಯಲ್ಲಿ ಮೊದಲ ಬಲಿ..! ನಿನ್ನೆ ಮೃತಪಟ್ಟ ವೃದ್ಧನಿಗೆ ಮೊನ್ನೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಮೃತ ವೃದ್ಧ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಮೃತನ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದಕ್ಕೆ ಜಿಲ್ಲಾಡಳಿತಕ್ಕೆ ಟೆನ್ಷನ್‌ ಆಗಿದೆ. ಸೋಂಕು ಯಾರಿಂದ ತಗುಲಿದೆ ಎಂಬುದು ಇನ್ನೂ ನಿಗೂಢವಾಗಿದೆ.ಇನ್ನು ನಿನ್ನೆ ಈ ವೃದ್ಧನ ಐವರು ಕುಟುಂಬಸ್ಥರಿಗೆ ಸೋಂಕು‌ ಇರೋದು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿದೆ.

ಒಟ್ನಲ್ಲಿ ಕರ್ನಾಟಕದಲ್ಲಿ ಹೆಮ್ಮಾರಿ ಕೊರೊನಾ ಡೆಡ್ಲಿ ಅಟ್ಯಾಕ್ ಮಾಡುತ್ತಿದ್ದು, ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ಗ್ರೀನ್‌ಜೋನ್‌ನಲ್ಲಿದ್ದ ದಾವಣಗೆರೆಯಲ್ಲಿ ಸಾಕಷ್ಟು ಆತಂಕ ಮನೆ ಮಾಡಿದ್ದು, ನಿನ್ನೆಯ ಒಂದು ಸಾವು ಜಿಲ್ಲೆಯ ಜನರ ಜನರನ್ನ ಬೆಚ್ಚಿ ಬೀಳಿಸಿದೆ.

ಹೀಗಾಗಿ ರಾಜ್ಯದ ಜನ ಲಾಕ್‌ಡೌನ್ ಸಡಿಲಿಕೆ ಆಯ್ತು ಅಂತ ನಿರ್ಲಕ್ಷ್ಯ ಮಾಡದೆ ಸಾಕಷ್ಟು ಎಚ್ಚರ ವಹಿಸಬೇಕಿದೆ. ನೀವು ಈ ವಿಷ್ಯದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ರೆ ಕಂಟಕ ಗ್ಯಾರಂಟಿ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ