AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ವೈರಸ್ ದಾಳಿಗೆ ಕರುನಾಡು ವಿಲವಿಲ, ಬೆಣ್ಣೆನಗರಿಯಲ್ಲಿ ಸೋಂಕಿಗೆ ಮೊದಲ ಬಲಿ!

ದಾವಣಗೆರೆ: ಕಂಡ ಕಂಡವರ ದೇಹ ಹೊಕ್ಕುತ್ತಾ.. ಅಮಾಯಕರ ಪ್ರಾಣ ತೆಗೆದು ರಣಕೇಕೆ ಹಾಕುತ್ತಿರೋ ಕೊರೊನಾ ಆರ್ಭಟಕ್ಕೆ ರಾಜ್ಯದಲ್ಲಿ ಕಮ್ಮಿಯಾಗೋ ಲಕ್ಷಣವೇ ಕಾಣುತ್ತಿಲ್ಲ. ರಕ್ಕಸ ವೃರಸ್ ಕುಣಿತಕ್ಕೆ ಕರುನಾಡಿಗೆ ಕರುನಾಡೇ ನಲುಗಿ ಹೋಗಿದೆ. ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 556ನೇ ಸೋಂಕಿತ 69 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ಇದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ ಬೆಣ್ಣೆನಗರಿಯಲ್ಲಿ ಮೊದಲ ಬಲಿ..! ನಿನ್ನೆ ಮೃತಪಟ್ಟ ವೃದ್ಧನಿಗೆ ಮೊನ್ನೆ […]

ಡೆಡ್ಲಿ ವೈರಸ್ ದಾಳಿಗೆ ಕರುನಾಡು ವಿಲವಿಲ, ಬೆಣ್ಣೆನಗರಿಯಲ್ಲಿ ಸೋಂಕಿಗೆ ಮೊದಲ ಬಲಿ!
ಸಾಧು ಶ್ರೀನಾಥ್​
|

Updated on: May 02, 2020 | 7:27 AM

Share

ದಾವಣಗೆರೆ: ಕಂಡ ಕಂಡವರ ದೇಹ ಹೊಕ್ಕುತ್ತಾ.. ಅಮಾಯಕರ ಪ್ರಾಣ ತೆಗೆದು ರಣಕೇಕೆ ಹಾಕುತ್ತಿರೋ ಕೊರೊನಾ ಆರ್ಭಟಕ್ಕೆ ರಾಜ್ಯದಲ್ಲಿ ಕಮ್ಮಿಯಾಗೋ ಲಕ್ಷಣವೇ ಕಾಣುತ್ತಿಲ್ಲ. ರಕ್ಕಸ ವೃರಸ್ ಕುಣಿತಕ್ಕೆ ಕರುನಾಡಿಗೆ ಕರುನಾಡೇ ನಲುಗಿ ಹೋಗಿದೆ.

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 556ನೇ ಸೋಂಕಿತ 69 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ಇದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ

ಬೆಣ್ಣೆನಗರಿಯಲ್ಲಿ ಮೊದಲ ಬಲಿ..! ನಿನ್ನೆ ಮೃತಪಟ್ಟ ವೃದ್ಧನಿಗೆ ಮೊನ್ನೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಮೃತ ವೃದ್ಧ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಮೃತನ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದಕ್ಕೆ ಜಿಲ್ಲಾಡಳಿತಕ್ಕೆ ಟೆನ್ಷನ್‌ ಆಗಿದೆ. ಸೋಂಕು ಯಾರಿಂದ ತಗುಲಿದೆ ಎಂಬುದು ಇನ್ನೂ ನಿಗೂಢವಾಗಿದೆ.ಇನ್ನು ನಿನ್ನೆ ಈ ವೃದ್ಧನ ಐವರು ಕುಟುಂಬಸ್ಥರಿಗೆ ಸೋಂಕು‌ ಇರೋದು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿದೆ.

ಒಟ್ನಲ್ಲಿ ಕರ್ನಾಟಕದಲ್ಲಿ ಹೆಮ್ಮಾರಿ ಕೊರೊನಾ ಡೆಡ್ಲಿ ಅಟ್ಯಾಕ್ ಮಾಡುತ್ತಿದ್ದು, ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ಗ್ರೀನ್‌ಜೋನ್‌ನಲ್ಲಿದ್ದ ದಾವಣಗೆರೆಯಲ್ಲಿ ಸಾಕಷ್ಟು ಆತಂಕ ಮನೆ ಮಾಡಿದ್ದು, ನಿನ್ನೆಯ ಒಂದು ಸಾವು ಜಿಲ್ಲೆಯ ಜನರ ಜನರನ್ನ ಬೆಚ್ಚಿ ಬೀಳಿಸಿದೆ.

ಹೀಗಾಗಿ ರಾಜ್ಯದ ಜನ ಲಾಕ್‌ಡೌನ್ ಸಡಿಲಿಕೆ ಆಯ್ತು ಅಂತ ನಿರ್ಲಕ್ಷ್ಯ ಮಾಡದೆ ಸಾಕಷ್ಟು ಎಚ್ಚರ ವಹಿಸಬೇಕಿದೆ. ನೀವು ಈ ವಿಷ್ಯದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ರೆ ಕಂಟಕ ಗ್ಯಾರಂಟಿ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ