AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ಕೊರೊನಾಗೆ ಮೊದಲ ಬಲಿ, ಖಂಡ್ರೆ ಹೇಳಿದ್ದು ನಿಜವಾಯ್ತಾ!

ಬೀದರ್: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 590ನೇ ಕೊರೊನಾ ಸೋಂಕಿತ ಬೀದರ್‌ನ 82 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ವೃದ್ಧನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಗದಿತ ಆಸ್ಪತ್ರೆಯಲ್ಲಿ 82 ವರ್ಷದ ವೃದ್ಧ ಇಂದು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್​ನಿಂದ ಮೂವರು ಸಾವಿಗೀಡಾಗಿದ್ದಾರೆ ಎಂದು ಭಾಲ್ಕಿಯಲ್ಲಿ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದರು. ಆದ್ರೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಇದನ್ನು ಬಹಿರಂಗಪಡಿಸಿಲ್ಲ […]

ಬೀದರ್​ನಲ್ಲಿ ಕೊರೊನಾಗೆ ಮೊದಲ ಬಲಿ, ಖಂಡ್ರೆ ಹೇಳಿದ್ದು ನಿಜವಾಯ್ತಾ!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 02, 2020 | 1:02 PM

Share

ಬೀದರ್: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 590ನೇ ಕೊರೊನಾ ಸೋಂಕಿತ ಬೀದರ್‌ನ 82 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ವೃದ್ಧನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಗದಿತ ಆಸ್ಪತ್ರೆಯಲ್ಲಿ 82 ವರ್ಷದ ವೃದ್ಧ ಇಂದು ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್​ನಿಂದ ಮೂವರು ಸಾವಿಗೀಡಾಗಿದ್ದಾರೆ ಎಂದು ಭಾಲ್ಕಿಯಲ್ಲಿ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದರು. ಆದ್ರೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಇದನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಒಬ್ಬ ಬಲಿಯಾಗಿದ್ದಾರೆಂದು ಸರ್ಕಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲೂ ಕೊರೊನಾಗೆ ಮತ್ತೊಬ್ಬರು ಬಲಿ: ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ದೀಪಾಂಜಲಿ ನಗರದ ನಿವಾಸಿಯಾಗಿರುವ 557ನೇ ಸೋಂಕಿತ 63 ವರ್ಷದ ವೃದ್ಧ ಮೃತಪಟ್ಟಿದ್ದಾರೆ. 465ನೇ ಸೋಂಕಿತರಿಂದ ವೃದ್ಧನಿಗೆ ಕೊರೊನಾ ಸೋಂಕು ತಗುಲಿತ್ತು. 465ನೇ ಸೋಂಕಿತ ಕೂಡ ಕೊರೊನಾದಿಂದ ಸಾವಿಗೀಡಾಗಿದ್ದರು.

Published On - 12:52 pm, Sat, 2 May 20