ನೀವು ಈ ಸ್ಟೋರಿ ಓದ್ಲೇಬೇಕು! ಸರ್ಕಾರಿ ಶಾಲೆಯಲ್ಲಿ ದಿಢೀರನೇ ಕೊರೊನಾ ಭೀತಿ?

ಚಾಮರಾಜನಗರ: ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸಲು ಹೋದ ಶಿಕ್ಷಕರಿಗೆ ಶಾಕ್ ಎದುರಾಗಿದ್ದು, ವೈರಸ್ ಬಗ್ಗೆ ಅರಿವು ಮೂಡಿಸುತ್ತಿರುವಾಗಲೇ ಶಾಲಾ ಮಕ್ಕಳು ವಾಂತಿ, ಭೇದಿ, ತಲೆನೋವೆಂದು ನಾಟಕವಾಡಿದ್ದಾರೆ. ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಗೊರಸಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಗೆ ರಜೆ ಸಿಗುತ್ತೆಂದು ಮೊದಲು ಇಬ್ಬರು ವಿದ್ಯಾರ್ಥಿಗಳು ನಾಟಕವಾಡಿದ್ದರು. ಅವರನ್ನು ನೋಡಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಭೇದಿ, ತಲೆನೋವು ಎಂದಿದ್ದಾರೆ. ನಂತರ ಮಹದೇಶ್ವರ ಬೆಟ್ಟ ಪ್ರಾ.ಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಚಿಕಿತ್ಸೆ […]

ನೀವು ಈ ಸ್ಟೋರಿ ಓದ್ಲೇಬೇಕು! ಸರ್ಕಾರಿ ಶಾಲೆಯಲ್ಲಿ ದಿಢೀರನೇ ಕೊರೊನಾ ಭೀತಿ?
ಸಾಧು ಶ್ರೀನಾಥ್​

Updated on: Mar 06, 2020 | 12:55 PM

ಚಾಮರಾಜನಗರ: ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸಲು ಹೋದ ಶಿಕ್ಷಕರಿಗೆ ಶಾಕ್ ಎದುರಾಗಿದ್ದು, ವೈರಸ್ ಬಗ್ಗೆ ಅರಿವು ಮೂಡಿಸುತ್ತಿರುವಾಗಲೇ ಶಾಲಾ ಮಕ್ಕಳು ವಾಂತಿ, ಭೇದಿ, ತಲೆನೋವೆಂದು ನಾಟಕವಾಡಿದ್ದಾರೆ. ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಗೊರಸಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಶಾಲೆಗೆ ರಜೆ ಸಿಗುತ್ತೆಂದು ಮೊದಲು ಇಬ್ಬರು ವಿದ್ಯಾರ್ಥಿಗಳು ನಾಟಕವಾಡಿದ್ದರು. ಅವರನ್ನು ನೋಡಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಭೇದಿ, ತಲೆನೋವು ಎಂದಿದ್ದಾರೆ. ನಂತರ ಮಹದೇಶ್ವರ ಬೆಟ್ಟ ಪ್ರಾ.ಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಿ ವಿದ್ಯಾರ್ಥಿಗಳ ರಕ್ತದ ಮಾದರಿಯನ್ನು ಪರೀಕ್ಷಿಸಿದ್ದಾರೆ. ನಂತರ ಶಾಲೆಯಲ್ಲೇ ಊಟ ಮಾಡಿ ಆಹಾರವನ್ನೂ ಶಿಕ್ಷಕರು ಪರೀಕ್ಷಿಸಿದ್ದಾರೆ. ರಕ್ತ ಮಾದರಿಯಲ್ಲೂ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ದೃಢೀಕರಿಸಿದರು. ಕೊರೊನಾ ಬಗ್ಗೆ ಅರಿವು ಮೂಡಿಸಲು ಹೋಗಿ ಮಕ್ಕಳಿಗೆ ಆಟ, ಶಿಕ್ಷಕರಿಗೆ ಪ್ರಾಣ ಸಂಕಟ ಎಂಬಂತಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us