AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪೇಷಂಟ್​ ಡಿಸ್ಚಾರ್ಜ್! ವಿಕ್ಟೋರಿಯಾ ಆಸ್ಪತ್ರೆ ಮಹಾ ಎಡವಟ್ಟು..

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಕೊರೊನಾ ಪಾಸಿಟಿವ್ ಬಂದ ಹಲವರಲ್ಲಿ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಒಂದು ಮಹಾ ಎಡವಟ್ಟು ಮಾಡಿಬಿಟ್ಟಿದೆ. ರಿಪೋರ್ಟ್​ ಅದಲು ಬದಲು, ಪಾಸಿಟಿವ್​ ಪೇಷಂಟ್​ ಡಿಸ್ಚಾರ್ಜ್! ಜೂನ್​ 11ರಂದು ಕೊರೊನಾ ಪಾಸಿಟಿವ್​ ಆದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮೊದಲನೇ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು. ಈ ಮಧ್ಯೆ ಮೂರು ದಿನಗಳ ಹಿಂದೆ […]

ಕೊರೊನಾ ಪೇಷಂಟ್​ ಡಿಸ್ಚಾರ್ಜ್! ವಿಕ್ಟೋರಿಯಾ ಆಸ್ಪತ್ರೆ ಮಹಾ ಎಡವಟ್ಟು..
KUSHAL V
| Edited By: |

Updated on:Jun 25, 2020 | 5:33 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಕೊರೊನಾ ಪಾಸಿಟಿವ್ ಬಂದ ಹಲವರಲ್ಲಿ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಒಂದು ಮಹಾ ಎಡವಟ್ಟು ಮಾಡಿಬಿಟ್ಟಿದೆ.

ರಿಪೋರ್ಟ್​ ಅದಲು ಬದಲು, ಪಾಸಿಟಿವ್​ ಪೇಷಂಟ್​ ಡಿಸ್ಚಾರ್ಜ್! ಜೂನ್​ 11ರಂದು ಕೊರೊನಾ ಪಾಸಿಟಿವ್​ ಆದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮೊದಲನೇ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು. ಈ ಮಧ್ಯೆ ಮೂರು ದಿನಗಳ ಹಿಂದೆ ಮತ್ತೊಬ್ಬ ಸೋಂಕಿತನು ಸಹ ಆಸ್ಪತ್ರೆಗೆ ದಾಖಲಾಗಿದ್ದ. ಹಾಗಾಗಿ ಎರಡೂ ಪೇಷಂಟ್​ಗಳ ಗಂಟಲು ದ್ರವವನ್ನ ಟೆಸ್ಟ್​ಗೆ ಕಳುಹಿಸಲಾಗಿತ್ತು.

ಆದರೆ, ಲ್ಯಾಬ್​ನಲ್ಲಿ ರಿಪೋರ್ಟ್​ಗಳೆರಡು ಅದಲುಬದಲಾಗಿ ಎರಡನೇ ಸೋಂಕಿತನಿಗೆ ಕೊರೊನಾ ಪಾಸಿಟಿವ್​ ಬಂದಿದ್ರೂ ಆತನಿಗೆ ನೆಗಟಿವ್​ ಬಂದಿದೆ ಎಂದು ಹೇಳಿ ಡಿಸ್ಚಾರ್ಜ್​ ಮಾಡಲಾಗಿದೆ. ಡಿಸ್ಚಾರ್ಜ್​ ಆಗಿದ್ದ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಹೊರಬಂದ ನಂತರ ಸಾಕಷ್ಟು ಜನರನ್ನು ಭೇಟಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟಿನಿಂದ ಮತ್ತಷ್ಟು ಜನರಿಗೆ ಸೋಂಕು ಹರಡಿರುವ ಭೀತಿ ಎದುರಾಗಿದೆ.

Published On - 5:05 pm, Thu, 25 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ