AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ‘ಬೃಹತ್‌’ ಭ್ರಷ್ಟಾಚಾರಕ್ಕೆ ಬೇಸತ್ತು ಕಾರಿನಲ್ಲಿ ಕಾಂಟ್ರಾಕ್ಟರ್‌ ಆತ್ಮಹತ್ಯೆಗೆ ಯತ್ನ?

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್‌ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಮತ್ತೊಂದು ಪ್ರಕರಣ ಇದಾಗಿದೆ. ಕಾಂಟ್ರಾಕ್ಟರ್‌ ಪತ್ನಿಯಿಂದ ಬಿಬಿಎಂಪಿ ಮಹಿಳಾ ಸಿಬ್ಬಂದಿ ವಿರುದ್ಧ ದೂರು ಹೌದು, ಬಿಬಿಎಂಪಿ ಕಾಂಟ್ರಾಕ್ಟರ್‌ 36 ವರ್ಷದ ಗಿರೀಶ್‌ ನಿದ್ರೆ ಮಾತ್ರೆ ಸೇವಿಸಿ ತನ್ನ ಕಾರ್‌ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆತನ ಪತ್ನಿ ಬಸವನಗುಡಿಯ ಮಹಿಳಾ […]

BBMP 'ಬೃಹತ್‌' ಭ್ರಷ್ಟಾಚಾರಕ್ಕೆ ಬೇಸತ್ತು ಕಾರಿನಲ್ಲಿ ಕಾಂಟ್ರಾಕ್ಟರ್‌ ಆತ್ಮಹತ್ಯೆಗೆ ಯತ್ನ?
Guru
| Edited By: |

Updated on:Jun 18, 2020 | 2:39 PM

Share

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್‌ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಮತ್ತೊಂದು ಪ್ರಕರಣ ಇದಾಗಿದೆ.

ಕಾಂಟ್ರಾಕ್ಟರ್‌ ಪತ್ನಿಯಿಂದ ಬಿಬಿಎಂಪಿ ಮಹಿಳಾ ಸಿಬ್ಬಂದಿ ವಿರುದ್ಧ ದೂರು ಹೌದು, ಬಿಬಿಎಂಪಿ ಕಾಂಟ್ರಾಕ್ಟರ್‌ 36 ವರ್ಷದ ಗಿರೀಶ್‌ ನಿದ್ರೆ ಮಾತ್ರೆ ಸೇವಿಸಿ ತನ್ನ ಕಾರ್‌ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆತನ ಪತ್ನಿ ಬಸವನಗುಡಿಯ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ದೂರಿನಲ್ಲಿ ತನ್ನ ಪತಿಯ ಆತ್ಮಹತ್ಯೆ ಯತ್ನಕ್ಕೆ ಬಿಬಿಎಂಪಿಯ ಆಕೌಂಟ್ಸ್‌ ವಿಭಾಗದ ಮಹಿಳಾ ಸೂಪರಿಂಟೆಂಡೆಂಟ್‌ ಉಷಾ ಅವರೇ ಕಾರಣ ಅಂತಾ ದೂರಿದ್ದಾರೆ.

ಜಯನಗರ ಪಾರ್ಕ್‌ ನಿರ್ವಹಣೆ ಆತ್ಮಹತ್ಯೆ ಯತ್ನಕ್ಕೆ ಕಾರಣ? ಆತ್ಮಹತ್ಯೆಗೆ ಕಾರಣ ಜಯನಗರದ ಪಾರ್ಕ್‌ ನಿರ್ವಹಣೆಯ ಗುತ್ತಿಗೆ ವಿವಾದ ಎನ್ನಲಾಗ್ತಿದೆ. ಗಿರೀಶ್‌ ಈ ಪಾರ್ಕ್‌ ನಿರ್ವಹಣೆಯ ಗುತ್ತಿಗೆ ಕೇಳಿದ್ದ. ಆದ್ರೆ ಉಷಾ ಇದಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಗಿರೀಶ್‌ ತನ್ನ ಇನ್ನೋವಾ ಕಾರ್‌ನ ಡ್ಯಾಕ್ಯುಮೆಂಟ್ಸ್‌ನ್ನ ಗ್ಯಾರೆಂಟಿಯಾಗಿ ಉಷಾ ಹತ್ತಿರ ಇಟ್ಟಿದ್ದರು ಎನ್ನಲಾಗ್ತಿದೆ.

ಆದ್ರೂ ಉಷಾ ಮತ್ತು ಅವರ ಸೋದರ ಸಂಬಂಧಿ ದೀಪಕ್‌ ಅನ್ನೋರು ದುಡ್ಡಿಗಾಗಿ ಗಿರೀಶ್‌ಗೆ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಈಗ ಕಾಂಟ್ರಾಕ್ಟರ್‌ ಗಿರೀಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗಿರೀಶ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಸವನಗುಡಿ ಪೊಲೀಸ‌ರು ತನಿಖೆ ಆರಂಭಿಸಿದ್ದಾರೆ.

Published On - 4:59 pm, Wed, 17 June 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ