AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ‘ಬೃಹತ್‌’ ಭ್ರಷ್ಟಾಚಾರಕ್ಕೆ ಬೇಸತ್ತು ಕಾರಿನಲ್ಲಿ ಕಾಂಟ್ರಾಕ್ಟರ್‌ ಆತ್ಮಹತ್ಯೆಗೆ ಯತ್ನ?

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್‌ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಮತ್ತೊಂದು ಪ್ರಕರಣ ಇದಾಗಿದೆ. ಕಾಂಟ್ರಾಕ್ಟರ್‌ ಪತ್ನಿಯಿಂದ ಬಿಬಿಎಂಪಿ ಮಹಿಳಾ ಸಿಬ್ಬಂದಿ ವಿರುದ್ಧ ದೂರು ಹೌದು, ಬಿಬಿಎಂಪಿ ಕಾಂಟ್ರಾಕ್ಟರ್‌ 36 ವರ್ಷದ ಗಿರೀಶ್‌ ನಿದ್ರೆ ಮಾತ್ರೆ ಸೇವಿಸಿ ತನ್ನ ಕಾರ್‌ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆತನ ಪತ್ನಿ ಬಸವನಗುಡಿಯ ಮಹಿಳಾ […]

BBMP 'ಬೃಹತ್‌' ಭ್ರಷ್ಟಾಚಾರಕ್ಕೆ ಬೇಸತ್ತು ಕಾರಿನಲ್ಲಿ ಕಾಂಟ್ರಾಕ್ಟರ್‌ ಆತ್ಮಹತ್ಯೆಗೆ ಯತ್ನ?
Guru
Guru| Edited By: ಆಯೇಷಾ ಬಾನು|

Updated on:Jun 18, 2020 | 2:39 PM

Share

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್‌ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಮತ್ತೊಂದು ಪ್ರಕರಣ ಇದಾಗಿದೆ.

ಕಾಂಟ್ರಾಕ್ಟರ್‌ ಪತ್ನಿಯಿಂದ ಬಿಬಿಎಂಪಿ ಮಹಿಳಾ ಸಿಬ್ಬಂದಿ ವಿರುದ್ಧ ದೂರು ಹೌದು, ಬಿಬಿಎಂಪಿ ಕಾಂಟ್ರಾಕ್ಟರ್‌ 36 ವರ್ಷದ ಗಿರೀಶ್‌ ನಿದ್ರೆ ಮಾತ್ರೆ ಸೇವಿಸಿ ತನ್ನ ಕಾರ್‌ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆತನ ಪತ್ನಿ ಬಸವನಗುಡಿಯ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ದೂರಿನಲ್ಲಿ ತನ್ನ ಪತಿಯ ಆತ್ಮಹತ್ಯೆ ಯತ್ನಕ್ಕೆ ಬಿಬಿಎಂಪಿಯ ಆಕೌಂಟ್ಸ್‌ ವಿಭಾಗದ ಮಹಿಳಾ ಸೂಪರಿಂಟೆಂಡೆಂಟ್‌ ಉಷಾ ಅವರೇ ಕಾರಣ ಅಂತಾ ದೂರಿದ್ದಾರೆ.

ಜಯನಗರ ಪಾರ್ಕ್‌ ನಿರ್ವಹಣೆ ಆತ್ಮಹತ್ಯೆ ಯತ್ನಕ್ಕೆ ಕಾರಣ? ಆತ್ಮಹತ್ಯೆಗೆ ಕಾರಣ ಜಯನಗರದ ಪಾರ್ಕ್‌ ನಿರ್ವಹಣೆಯ ಗುತ್ತಿಗೆ ವಿವಾದ ಎನ್ನಲಾಗ್ತಿದೆ. ಗಿರೀಶ್‌ ಈ ಪಾರ್ಕ್‌ ನಿರ್ವಹಣೆಯ ಗುತ್ತಿಗೆ ಕೇಳಿದ್ದ. ಆದ್ರೆ ಉಷಾ ಇದಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಗಿರೀಶ್‌ ತನ್ನ ಇನ್ನೋವಾ ಕಾರ್‌ನ ಡ್ಯಾಕ್ಯುಮೆಂಟ್ಸ್‌ನ್ನ ಗ್ಯಾರೆಂಟಿಯಾಗಿ ಉಷಾ ಹತ್ತಿರ ಇಟ್ಟಿದ್ದರು ಎನ್ನಲಾಗ್ತಿದೆ.

ಆದ್ರೂ ಉಷಾ ಮತ್ತು ಅವರ ಸೋದರ ಸಂಬಂಧಿ ದೀಪಕ್‌ ಅನ್ನೋರು ದುಡ್ಡಿಗಾಗಿ ಗಿರೀಶ್‌ಗೆ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಈಗ ಕಾಂಟ್ರಾಕ್ಟರ್‌ ಗಿರೀಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗಿರೀಶ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಸವನಗುಡಿ ಪೊಲೀಸ‌ರು ತನಿಖೆ ಆರಂಭಿಸಿದ್ದಾರೆ.

Published On - 4:59 pm, Wed, 17 June 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ