AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ‘ಬೃಹತ್‌’ ಭ್ರಷ್ಟಾಚಾರಕ್ಕೆ ಬೇಸತ್ತು ಕಾರಿನಲ್ಲಿ ಕಾಂಟ್ರಾಕ್ಟರ್‌ ಆತ್ಮಹತ್ಯೆಗೆ ಯತ್ನ?

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್‌ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಮತ್ತೊಂದು ಪ್ರಕರಣ ಇದಾಗಿದೆ. ಕಾಂಟ್ರಾಕ್ಟರ್‌ ಪತ್ನಿಯಿಂದ ಬಿಬಿಎಂಪಿ ಮಹಿಳಾ ಸಿಬ್ಬಂದಿ ವಿರುದ್ಧ ದೂರು ಹೌದು, ಬಿಬಿಎಂಪಿ ಕಾಂಟ್ರಾಕ್ಟರ್‌ 36 ವರ್ಷದ ಗಿರೀಶ್‌ ನಿದ್ರೆ ಮಾತ್ರೆ ಸೇವಿಸಿ ತನ್ನ ಕಾರ್‌ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆತನ ಪತ್ನಿ ಬಸವನಗುಡಿಯ ಮಹಿಳಾ […]

BBMP 'ಬೃಹತ್‌' ಭ್ರಷ್ಟಾಚಾರಕ್ಕೆ ಬೇಸತ್ತು ಕಾರಿನಲ್ಲಿ ಕಾಂಟ್ರಾಕ್ಟರ್‌ ಆತ್ಮಹತ್ಯೆಗೆ ಯತ್ನ?
Guru
| Updated By: ಆಯೇಷಾ ಬಾನು|

Updated on:Jun 18, 2020 | 2:39 PM

Share

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್‌ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಮತ್ತೊಂದು ಪ್ರಕರಣ ಇದಾಗಿದೆ.

ಕಾಂಟ್ರಾಕ್ಟರ್‌ ಪತ್ನಿಯಿಂದ ಬಿಬಿಎಂಪಿ ಮಹಿಳಾ ಸಿಬ್ಬಂದಿ ವಿರುದ್ಧ ದೂರು ಹೌದು, ಬಿಬಿಎಂಪಿ ಕಾಂಟ್ರಾಕ್ಟರ್‌ 36 ವರ್ಷದ ಗಿರೀಶ್‌ ನಿದ್ರೆ ಮಾತ್ರೆ ಸೇವಿಸಿ ತನ್ನ ಕಾರ್‌ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆತನ ಪತ್ನಿ ಬಸವನಗುಡಿಯ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ದೂರಿನಲ್ಲಿ ತನ್ನ ಪತಿಯ ಆತ್ಮಹತ್ಯೆ ಯತ್ನಕ್ಕೆ ಬಿಬಿಎಂಪಿಯ ಆಕೌಂಟ್ಸ್‌ ವಿಭಾಗದ ಮಹಿಳಾ ಸೂಪರಿಂಟೆಂಡೆಂಟ್‌ ಉಷಾ ಅವರೇ ಕಾರಣ ಅಂತಾ ದೂರಿದ್ದಾರೆ.

ಜಯನಗರ ಪಾರ್ಕ್‌ ನಿರ್ವಹಣೆ ಆತ್ಮಹತ್ಯೆ ಯತ್ನಕ್ಕೆ ಕಾರಣ? ಆತ್ಮಹತ್ಯೆಗೆ ಕಾರಣ ಜಯನಗರದ ಪಾರ್ಕ್‌ ನಿರ್ವಹಣೆಯ ಗುತ್ತಿಗೆ ವಿವಾದ ಎನ್ನಲಾಗ್ತಿದೆ. ಗಿರೀಶ್‌ ಈ ಪಾರ್ಕ್‌ ನಿರ್ವಹಣೆಯ ಗುತ್ತಿಗೆ ಕೇಳಿದ್ದ. ಆದ್ರೆ ಉಷಾ ಇದಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಗಿರೀಶ್‌ ತನ್ನ ಇನ್ನೋವಾ ಕಾರ್‌ನ ಡ್ಯಾಕ್ಯುಮೆಂಟ್ಸ್‌ನ್ನ ಗ್ಯಾರೆಂಟಿಯಾಗಿ ಉಷಾ ಹತ್ತಿರ ಇಟ್ಟಿದ್ದರು ಎನ್ನಲಾಗ್ತಿದೆ.

ಆದ್ರೂ ಉಷಾ ಮತ್ತು ಅವರ ಸೋದರ ಸಂಬಂಧಿ ದೀಪಕ್‌ ಅನ್ನೋರು ದುಡ್ಡಿಗಾಗಿ ಗಿರೀಶ್‌ಗೆ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಈಗ ಕಾಂಟ್ರಾಕ್ಟರ್‌ ಗಿರೀಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗಿರೀಶ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಸವನಗುಡಿ ಪೊಲೀಸ‌ರು ತನಿಖೆ ಆರಂಭಿಸಿದ್ದಾರೆ.

Published On - 4:59 pm, Wed, 17 June 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ