AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ
ಪ್ರತಿಭಟನಾ ನಿರತ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 10:01 PM

Share

ಹುಬ್ಬಳ್ಳಿ: ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಹುಬ್ಬಳ್ಳಿ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರು ಪ್ರತಿಭಟನೆ ಮಾಡಿದ್ದಾರೆ.

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ. ಕಚೇರಿ ಒಳಗೆ ಎಪಿಎಂಸಿ ಅಧಿಕಾರಿಗಳಾದ ಪ್ರದೀಪ್, ಪ್ರಕಾಶ್​ಗೆ ದಿಗ್ಬಂಧನ ಹಾಕಿದ್ದಾರೆ.

ಕಳೆದ 3 ಗಂಟೆಯಿಂದ ಕೂಡಿ ಹಾಕಿ ರೈತರು ಪ್ರಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹತ್ತಿ ಖರೀದಿ ಕೇಂದ್ರದ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಫೋಲಿಸರು ಸ್ಥಳಕ್ಕೆ ಬರುತ್ತಿಲ್ಲ.

ಇನ್ನು, ಪೊಲೀಸರು ಬಂದರೂ ಯಾರೊಬ್ಬರೂ ಕಚೇರಿ ಒಳಗೆ ಹೋಗದಂತೆ ನೋಡಿಕೊಳ್ಳಲು ಹತ್ತಿ ತುಂಬಿದ ಟ್ರಾಕ್ಟರ್​​ಗಳನ್ನು ಅಧಿಕಾರಿಗಳನ್ನು ಕೂಡಿ ಹಾಕಿದ ಕಚೇರಿಗೆ ಅಡ್ಡಲಾಗಿ ನಿಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಂಜಾಬ್​ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಈಗ ಹುಬ್ಬಳ್ಳಿ ರೈತರು ಇದೇ ಮಾರ್ಗ ಅನುಸರಿಸಿದ್ದು, ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?