AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ
ಪ್ರತಿಭಟನಾ ನಿರತ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 10:01 PM

Share

ಹುಬ್ಬಳ್ಳಿ: ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಹುಬ್ಬಳ್ಳಿ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರು ಪ್ರತಿಭಟನೆ ಮಾಡಿದ್ದಾರೆ.

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ. ಕಚೇರಿ ಒಳಗೆ ಎಪಿಎಂಸಿ ಅಧಿಕಾರಿಗಳಾದ ಪ್ರದೀಪ್, ಪ್ರಕಾಶ್​ಗೆ ದಿಗ್ಬಂಧನ ಹಾಕಿದ್ದಾರೆ.

ಕಳೆದ 3 ಗಂಟೆಯಿಂದ ಕೂಡಿ ಹಾಕಿ ರೈತರು ಪ್ರಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹತ್ತಿ ಖರೀದಿ ಕೇಂದ್ರದ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಫೋಲಿಸರು ಸ್ಥಳಕ್ಕೆ ಬರುತ್ತಿಲ್ಲ.

ಇನ್ನು, ಪೊಲೀಸರು ಬಂದರೂ ಯಾರೊಬ್ಬರೂ ಕಚೇರಿ ಒಳಗೆ ಹೋಗದಂತೆ ನೋಡಿಕೊಳ್ಳಲು ಹತ್ತಿ ತುಂಬಿದ ಟ್ರಾಕ್ಟರ್​​ಗಳನ್ನು ಅಧಿಕಾರಿಗಳನ್ನು ಕೂಡಿ ಹಾಕಿದ ಕಚೇರಿಗೆ ಅಡ್ಡಲಾಗಿ ನಿಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಂಜಾಬ್​ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಈಗ ಹುಬ್ಬಳ್ಳಿ ರೈತರು ಇದೇ ಮಾರ್ಗ ಅನುಸರಿಸಿದ್ದು, ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?