AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ತುಮಕೂರಲ್ಲಿ ಶುರುವಾಯ್ತು ಮತ್ತೊಂದು ಹಾವಳಿ

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಮಾರುವವರ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಎಲ್ಲಾ ಕಾಯಿಲೆಗಳಿಗೆ ಮದ್ದು ನೀಡ್ತೀವಿ ಅಂತಾ ನಕಲಿ ಔಷಧಿ ನೀಡಿ ಜನರಿಗೆ ಮೋಸ ಮಾಡ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯ ಪಾವಗಡದಲ್ಲಿ ‌ನಡೆದಿದೆ. ಪಾವಗಡ ಪಟ್ಟಣದ ಶಾರದಾ ವಿದ್ಯಾಪೀಠದ ಮುಂಭಾಗದಲ್ಲಿ ಕೆಲವರು ತಾಲೂಕು ಮತ್ತು ಆಂಧ್ರದಿಂದ ಬರುವ ಜನರಿಗೆ ಬಾಳೆಹಣ್ಣಿನಲ್ಲಿ ನಾಟಿ ಔಷಧಿ ನೀಡುವುದಾಗಿ ತಿಳಿಸಿ ಅವರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರಂತೆ. ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ […]

ಕೊರೊನಾ ಮಧ್ಯೆ ತುಮಕೂರಲ್ಲಿ ಶುರುವಾಯ್ತು ಮತ್ತೊಂದು ಹಾವಳಿ
KUSHAL V
|

Updated on:Jul 05, 2020 | 7:02 PM

Share

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಮಾರುವವರ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಎಲ್ಲಾ ಕಾಯಿಲೆಗಳಿಗೆ ಮದ್ದು ನೀಡ್ತೀವಿ ಅಂತಾ ನಕಲಿ ಔಷಧಿ ನೀಡಿ ಜನರಿಗೆ ಮೋಸ ಮಾಡ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯ ಪಾವಗಡದಲ್ಲಿ ‌ನಡೆದಿದೆ.

ಪಾವಗಡ ಪಟ್ಟಣದ ಶಾರದಾ ವಿದ್ಯಾಪೀಠದ ಮುಂಭಾಗದಲ್ಲಿ ಕೆಲವರು ತಾಲೂಕು ಮತ್ತು ಆಂಧ್ರದಿಂದ ಬರುವ ಜನರಿಗೆ ಬಾಳೆಹಣ್ಣಿನಲ್ಲಿ ನಾಟಿ ಔಷಧಿ ನೀಡುವುದಾಗಿ ತಿಳಿಸಿ ಅವರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರಂತೆ. ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲವಂತೆ.

ಈ ಮಧ್ಯೆ ಮಹಾಮಾರಿಯ ಸಂದರ್ಭದಲ್ಲಿಯೂ ಸಹ ನಾಟಿ ಔಷಧಿ ನೀಡುತ್ತೇವೆ ಎಂದು ಈ ತಂಡವು ಹೇಳಿಕೊಂಡಿದ್ದಾರಂತೆ. ಹಾಗಾಗಿ ಬಹಳಷ್ಟು ಜನರು ಇಲ್ಲಿಗೆ ಬರುತ್ತಿದ್ದಾರೆ. ಇದಲ್ಲದೆ, ನೆರೆಯ ಆಂಧ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿರುವುದರಿಂದ ಕೊರೊನಾ ಹರಡುವ ಸಂಭವವೂ ಇದೆ. ಇಷ್ಟಿದ್ದರೂ ಆಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಮಾತು.

ಸ್ಥಳೀಯರೇ ಖುದ್ದು ಈ ಬಗ್ಗೆ ಪ್ರಶ್ನಿಸಲು ಔಷಧಿ ಮಾರುವವರ ಬಳಿ ಹೋದರೇ ಅವರನ್ನ ಮನಬಂದಂತೆ ‌ನಿಂದಿಸುತ್ತಾರಂತೆ. ಸದ್ಯ ಪಾವಗಡದಲ್ಲಿ ಹಾಗೂ ಪಕ್ಕದ ಆಂಧ್ರದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂಥ ವೇಳೆಯಲ್ಲಿ ನಾಟಿ ಔಷಧಿ ನೀಡುವ ನೆಪದಲ್ಲಿ ಜನರಿಗೆ ಮೋಸ ಮಾಡುತ್ತಿರುವುದು ಎಷ್ಟು ಸರಿ‌ ಅನ್ನೋ ಮಾತುಗಳು ಕೇಳಿಬರುತ್ತವೆ. ಹೀಗಾಗಿ, ಇವರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Published On - 7:00 pm, Sun, 5 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!