AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ತುಮಕೂರಲ್ಲಿ ಶುರುವಾಯ್ತು ಮತ್ತೊಂದು ಹಾವಳಿ

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಮಾರುವವರ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಎಲ್ಲಾ ಕಾಯಿಲೆಗಳಿಗೆ ಮದ್ದು ನೀಡ್ತೀವಿ ಅಂತಾ ನಕಲಿ ಔಷಧಿ ನೀಡಿ ಜನರಿಗೆ ಮೋಸ ಮಾಡ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯ ಪಾವಗಡದಲ್ಲಿ ‌ನಡೆದಿದೆ. ಪಾವಗಡ ಪಟ್ಟಣದ ಶಾರದಾ ವಿದ್ಯಾಪೀಠದ ಮುಂಭಾಗದಲ್ಲಿ ಕೆಲವರು ತಾಲೂಕು ಮತ್ತು ಆಂಧ್ರದಿಂದ ಬರುವ ಜನರಿಗೆ ಬಾಳೆಹಣ್ಣಿನಲ್ಲಿ ನಾಟಿ ಔಷಧಿ ನೀಡುವುದಾಗಿ ತಿಳಿಸಿ ಅವರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರಂತೆ. ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ […]

ಕೊರೊನಾ ಮಧ್ಯೆ ತುಮಕೂರಲ್ಲಿ ಶುರುವಾಯ್ತು ಮತ್ತೊಂದು ಹಾವಳಿ
KUSHAL V
|

Updated on:Jul 05, 2020 | 7:02 PM

Share

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಮಾರುವವರ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಎಲ್ಲಾ ಕಾಯಿಲೆಗಳಿಗೆ ಮದ್ದು ನೀಡ್ತೀವಿ ಅಂತಾ ನಕಲಿ ಔಷಧಿ ನೀಡಿ ಜನರಿಗೆ ಮೋಸ ಮಾಡ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯ ಪಾವಗಡದಲ್ಲಿ ‌ನಡೆದಿದೆ.

ಪಾವಗಡ ಪಟ್ಟಣದ ಶಾರದಾ ವಿದ್ಯಾಪೀಠದ ಮುಂಭಾಗದಲ್ಲಿ ಕೆಲವರು ತಾಲೂಕು ಮತ್ತು ಆಂಧ್ರದಿಂದ ಬರುವ ಜನರಿಗೆ ಬಾಳೆಹಣ್ಣಿನಲ್ಲಿ ನಾಟಿ ಔಷಧಿ ನೀಡುವುದಾಗಿ ತಿಳಿಸಿ ಅವರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರಂತೆ. ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲವಂತೆ.

ಈ ಮಧ್ಯೆ ಮಹಾಮಾರಿಯ ಸಂದರ್ಭದಲ್ಲಿಯೂ ಸಹ ನಾಟಿ ಔಷಧಿ ನೀಡುತ್ತೇವೆ ಎಂದು ಈ ತಂಡವು ಹೇಳಿಕೊಂಡಿದ್ದಾರಂತೆ. ಹಾಗಾಗಿ ಬಹಳಷ್ಟು ಜನರು ಇಲ್ಲಿಗೆ ಬರುತ್ತಿದ್ದಾರೆ. ಇದಲ್ಲದೆ, ನೆರೆಯ ಆಂಧ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿರುವುದರಿಂದ ಕೊರೊನಾ ಹರಡುವ ಸಂಭವವೂ ಇದೆ. ಇಷ್ಟಿದ್ದರೂ ಆಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಮಾತು.

ಸ್ಥಳೀಯರೇ ಖುದ್ದು ಈ ಬಗ್ಗೆ ಪ್ರಶ್ನಿಸಲು ಔಷಧಿ ಮಾರುವವರ ಬಳಿ ಹೋದರೇ ಅವರನ್ನ ಮನಬಂದಂತೆ ‌ನಿಂದಿಸುತ್ತಾರಂತೆ. ಸದ್ಯ ಪಾವಗಡದಲ್ಲಿ ಹಾಗೂ ಪಕ್ಕದ ಆಂಧ್ರದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂಥ ವೇಳೆಯಲ್ಲಿ ನಾಟಿ ಔಷಧಿ ನೀಡುವ ನೆಪದಲ್ಲಿ ಜನರಿಗೆ ಮೋಸ ಮಾಡುತ್ತಿರುವುದು ಎಷ್ಟು ಸರಿ‌ ಅನ್ನೋ ಮಾತುಗಳು ಕೇಳಿಬರುತ್ತವೆ. ಹೀಗಾಗಿ, ಇವರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Published On - 7:00 pm, Sun, 5 July 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?