AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ತುಮಕೂರಲ್ಲಿ ಶುರುವಾಯ್ತು ಮತ್ತೊಂದು ಹಾವಳಿ

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಮಾರುವವರ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಎಲ್ಲಾ ಕಾಯಿಲೆಗಳಿಗೆ ಮದ್ದು ನೀಡ್ತೀವಿ ಅಂತಾ ನಕಲಿ ಔಷಧಿ ನೀಡಿ ಜನರಿಗೆ ಮೋಸ ಮಾಡ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯ ಪಾವಗಡದಲ್ಲಿ ‌ನಡೆದಿದೆ. ಪಾವಗಡ ಪಟ್ಟಣದ ಶಾರದಾ ವಿದ್ಯಾಪೀಠದ ಮುಂಭಾಗದಲ್ಲಿ ಕೆಲವರು ತಾಲೂಕು ಮತ್ತು ಆಂಧ್ರದಿಂದ ಬರುವ ಜನರಿಗೆ ಬಾಳೆಹಣ್ಣಿನಲ್ಲಿ ನಾಟಿ ಔಷಧಿ ನೀಡುವುದಾಗಿ ತಿಳಿಸಿ ಅವರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರಂತೆ. ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ […]

ಕೊರೊನಾ ಮಧ್ಯೆ ತುಮಕೂರಲ್ಲಿ ಶುರುವಾಯ್ತು ಮತ್ತೊಂದು ಹಾವಳಿ
KUSHAL V
|

Updated on:Jul 05, 2020 | 7:02 PM

Share

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಮಾರುವವರ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಎಲ್ಲಾ ಕಾಯಿಲೆಗಳಿಗೆ ಮದ್ದು ನೀಡ್ತೀವಿ ಅಂತಾ ನಕಲಿ ಔಷಧಿ ನೀಡಿ ಜನರಿಗೆ ಮೋಸ ಮಾಡ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯ ಪಾವಗಡದಲ್ಲಿ ‌ನಡೆದಿದೆ.

ಪಾವಗಡ ಪಟ್ಟಣದ ಶಾರದಾ ವಿದ್ಯಾಪೀಠದ ಮುಂಭಾಗದಲ್ಲಿ ಕೆಲವರು ತಾಲೂಕು ಮತ್ತು ಆಂಧ್ರದಿಂದ ಬರುವ ಜನರಿಗೆ ಬಾಳೆಹಣ್ಣಿನಲ್ಲಿ ನಾಟಿ ಔಷಧಿ ನೀಡುವುದಾಗಿ ತಿಳಿಸಿ ಅವರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರಂತೆ. ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲವಂತೆ.

ಈ ಮಧ್ಯೆ ಮಹಾಮಾರಿಯ ಸಂದರ್ಭದಲ್ಲಿಯೂ ಸಹ ನಾಟಿ ಔಷಧಿ ನೀಡುತ್ತೇವೆ ಎಂದು ಈ ತಂಡವು ಹೇಳಿಕೊಂಡಿದ್ದಾರಂತೆ. ಹಾಗಾಗಿ ಬಹಳಷ್ಟು ಜನರು ಇಲ್ಲಿಗೆ ಬರುತ್ತಿದ್ದಾರೆ. ಇದಲ್ಲದೆ, ನೆರೆಯ ಆಂಧ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿರುವುದರಿಂದ ಕೊರೊನಾ ಹರಡುವ ಸಂಭವವೂ ಇದೆ. ಇಷ್ಟಿದ್ದರೂ ಆಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಮಾತು.

ಸ್ಥಳೀಯರೇ ಖುದ್ದು ಈ ಬಗ್ಗೆ ಪ್ರಶ್ನಿಸಲು ಔಷಧಿ ಮಾರುವವರ ಬಳಿ ಹೋದರೇ ಅವರನ್ನ ಮನಬಂದಂತೆ ‌ನಿಂದಿಸುತ್ತಾರಂತೆ. ಸದ್ಯ ಪಾವಗಡದಲ್ಲಿ ಹಾಗೂ ಪಕ್ಕದ ಆಂಧ್ರದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂಥ ವೇಳೆಯಲ್ಲಿ ನಾಟಿ ಔಷಧಿ ನೀಡುವ ನೆಪದಲ್ಲಿ ಜನರಿಗೆ ಮೋಸ ಮಾಡುತ್ತಿರುವುದು ಎಷ್ಟು ಸರಿ‌ ಅನ್ನೋ ಮಾತುಗಳು ಕೇಳಿಬರುತ್ತವೆ. ಹೀಗಾಗಿ, ಇವರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Published On - 7:00 pm, Sun, 5 July 20

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ