ರಾಜ್ಯದಲ್ಲಿಂದು 135 ಜನ ಕೊವಿಡ್-19ಗೆ ಬಲಿ, 9,058 ಹೊಸ ಪಾಸಿಟಿವ್ ಪ್ರಕರಣಗಳು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿಂದು 135 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹೊಸದಾಗಿ 9,058 ಜನ ಕೊರೊನಾ ಸೋಂಕು ತಗುಲಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 3,51,481ಕ್ಕೇರಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,837 ತಲುಪಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 40 ಜನರ ಬಲಿಯಾಗಿದ್ದಾರೆ ಮತ್ತು 2,967 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ ಎರಡು ಸಾವಿರ (2005) ಗಡಿ ದಾಟಿದೆ ಮತ್ತು ಸೋಂಕಿತರ ಸಂಖ್ಯೆ1,32,092ಕ್ಕೇರಿದೆ. ರಾಜ್ಯದಲ್ಲಿ […]

ರಾಜ್ಯದಲ್ಲಿಂದು 135 ಜನ ಕೊವಿಡ್-19ಗೆ ಬಲಿ, 9,058 ಹೊಸ ಪಾಸಿಟಿವ್ ಪ್ರಕರಣಗಳು
ಅರುಣ್​ ಕುಮಾರ್​ ಬೆಳ್ಳಿ

Updated on: Sep 01, 2020 | 7:40 PM

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿಂದು 135 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹೊಸದಾಗಿ 9,058 ಜನ ಕೊರೊನಾ ಸೋಂಕು ತಗುಲಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 3,51,481ಕ್ಕೇರಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,837 ತಲುಪಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 40 ಜನರ ಬಲಿಯಾಗಿದ್ದಾರೆ ಮತ್ತು 2,967 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ ಎರಡು ಸಾವಿರ (2005) ಗಡಿ ದಾಟಿದೆ ಮತ್ತು ಸೋಂಕಿತರ ಸಂಖ್ಯೆ1,32,092ಕ್ಕೇರಿದೆ.

ರಾಜ್ಯದಲ್ಲಿ 2,54,626 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಉಳಿದ 90,999 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಹಾಗೆಯೇ, ಬೆಂಗಳೂರಿನ ಒಟ್ಟು 1,32,092 ಸೋಂಕಿತರಲ್ಲಿ 91,180 ಜನ ಚೇತರಿಸಿಕೊಂಡು ಮನೆಗಳಿಗೆ ಹಿಂದಿರುಗಿದ್ದಾರೆ. ಉಳಿದ 38,906 ಸೋಂಕಿತರು ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us