AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು ನೂರಕ್ಕೂ ಹೆಚ್ಚು ಸಾವು ಮತ್ತು ಏಳು ಸಾವಿರಕ್ಕಿಂತ ಜಾಸ್ತಿ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಇಂದು ಸಾಯಂಕಾಲ ಒದಗಿಸಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 122 ಜನ ಕೊವಿಡ್-19ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 7,339 ಜನರಲ್ಲಿ ಸೋಂಕು ಧೃಡಪಟ್ಟಿದೆ. ವ್ಯಾಧಿಗೆ ಬಲಿಯಾದವರ ಸಂಖ್ಯೆ 8,145 ತಲುಪಿದ್ದು ಸೋಂಕಿತರ ಸಂಖ್ಯೆ 5,26,876ಕ್ಕೇರಿದೆ. ಸೋಂಕಿತರ ಪೈಕಿ 4,23,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಉಳಿದ 95,335 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ, ಬೆಂಗಳೂರಿನಲ್ಲಿ ಸೋಮವಾರದಂದು 32 ಜನ ಪ್ಯಾಂಡೆಮಿಕ್​ನಿಂದಾಗಿ ಮೃತಪಟ್ಟಿದ್ದಾರೆ ಮತ್ತು […]

ರಾಜ್ಯದಲ್ಲಿಂದು ನೂರಕ್ಕೂ ಹೆಚ್ಚು ಸಾವು ಮತ್ತು ಏಳು ಸಾವಿರಕ್ಕಿಂತ ಜಾಸ್ತಿ ಸೋಂಕಿತರು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 21, 2020 | 8:29 PM

Share

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಇಂದು ಸಾಯಂಕಾಲ ಒದಗಿಸಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 122 ಜನ ಕೊವಿಡ್-19ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 7,339 ಜನರಲ್ಲಿ ಸೋಂಕು ಧೃಡಪಟ್ಟಿದೆ. ವ್ಯಾಧಿಗೆ ಬಲಿಯಾದವರ ಸಂಖ್ಯೆ 8,145 ತಲುಪಿದ್ದು ಸೋಂಕಿತರ ಸಂಖ್ಯೆ 5,26,876ಕ್ಕೇರಿದೆ.

ಸೋಂಕಿತರ ಪೈಕಿ 4,23,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಉಳಿದ 95,335 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಗೆಯೇ, ಬೆಂಗಳೂರಿನಲ್ಲಿ ಸೋಮವಾರದಂದು 32 ಜನ ಪ್ಯಾಂಡೆಮಿಕ್​ನಿಂದಾಗಿ ಮೃತಪಟ್ಟಿದ್ದಾರೆ ಮತ್ತು 2,886 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದುವರೆಗೆ ರಾಜಧಾನಿಯಲ್ಲಿ ಸೋಂಕಿಗೆ ತುತ್ತಾದವರ ಸಂಖ್ಯೆ 2,689 ತಲುಪಿದೆ ಮತ್ತು ಸೋಂಕು ತಗುಲಿಸಿಕೊಂಡವರ ಸಂಖ್ಯೆ 1,97,646ಕ್ಕೆ ಮುಟ್ಟಿದೆ.

ಸೋಂಕಿತರ ಪೈಕಿ 1,53,884 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 41,072 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More