ಅಪರಿಚಿತ ವಾಹನ ಡಿಕ್ಕಿ, ಬೈಕ್‌ನಲ್ಲಿದ್ದ ಕೊವಿಡ್ ನರ್ಸ್‌ಗೆ ಗಂಭೀರ ಗಾಯ

ಕಲಬುರಗಿ: ಕೊರೊನಾ ಡ್ಯೂಟಿಗೆ ಹೋಗ್ತಿದ್ದ ಕೊವಿಡ್ ನರ್ಸ್‌ ಇದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನರ್ಸ್​ಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಬಳಿ ನಡೆದಿದೆ. ಕೆಲಸಕ್ಕೆ ಹಾಜರಾಗಲು ಕಲಬುರಗಿಯಿಂದ ಚಿತ್ತಾಪುರಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದ ನರ್ಸ್​ ಸವಾರನ ಹಿಂಬದಿ ಕುಳಿತಿದ್ದರು. ವೇಗವಾಗಿ ಬಂದ ಅಪರಿಚಿತ ವಾಹನ ಕೊವಿಡ್ ನರ್ಸ್‌ ರಾಜಕುಮಾರಿಗೆ (28) ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ನರ್ಸ್ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ […]

ಅಪರಿಚಿತ ವಾಹನ ಡಿಕ್ಕಿ, ಬೈಕ್‌ನಲ್ಲಿದ್ದ ಕೊವಿಡ್ ನರ್ಸ್‌ಗೆ ಗಂಭೀರ ಗಾಯ
ಸಾಧು ಶ್ರೀನಾಥ್​

Updated on: May 15, 2020 | 1:03 PM

ಕಲಬುರಗಿ: ಕೊರೊನಾ ಡ್ಯೂಟಿಗೆ ಹೋಗ್ತಿದ್ದ ಕೊವಿಡ್ ನರ್ಸ್‌ ಇದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನರ್ಸ್​ಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಬಳಿ ನಡೆದಿದೆ.

ಕೆಲಸಕ್ಕೆ ಹಾಜರಾಗಲು ಕಲಬುರಗಿಯಿಂದ ಚಿತ್ತಾಪುರಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದ ನರ್ಸ್​ ಸವಾರನ ಹಿಂಬದಿ ಕುಳಿತಿದ್ದರು. ವೇಗವಾಗಿ ಬಂದ ಅಪರಿಚಿತ ವಾಹನ ಕೊವಿಡ್ ನರ್ಸ್‌ ರಾಜಕುಮಾರಿಗೆ (28) ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಈ ಪರಿಣಾಮ ನರ್ಸ್ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ ಹಾಗೂ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 12:38 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us