ಕರ್ತವ್ಯದ ವೇಳೆ ಹೃದಯಾಘಾತ, ಕೊವಿಡ್ ವಾರಿಯರ್ ಸಾವು

ಗದಗ: ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತವಾಗಿ ಕೊವಿಡ್ ವಾರಿಯರ್ ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಉಮೇಶ್(37) ಮೃತಪಟ್ಟವರು. ಕೊಣ್ಣೂರ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಚಾಲಕ ಉಮೇಶ್​ನನ್ನು ಧಾರವಾಡ ಎಸ್​ಡಿಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ದಾರಿ ಮಧ್ಯೆಯೇ ಉಮೇಶ್ ಮೃತಪಟ್ಟಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಉಮೇಶ್ ಮೃತಪಟ್ಟಿದ್ದರೂ ಡಿಹೆಚ್ಒ ಡಾ.ಸತೀಶ್ ಬಸರಿಗಿಡದ ಅವರಿಗೆ ಗೊತ್ತಿಲ್ಲವಂತೆ!  ಈ ಬಗ್ಗೆ ವಿಚಾರಿಸಿದ್ರೆ.. ಅದು ನನ್ನ ವ್ಯಾಪ್ತಿಗೆ ಬರಲ್ಲ ಎಂದು ಉಡಾಫೆ ಉತ್ತರವನ್ನೂ ನೀಡಿದ್ದಾರೆ.

ಕರ್ತವ್ಯದ ವೇಳೆ ಹೃದಯಾಘಾತ, ಕೊವಿಡ್ ವಾರಿಯರ್ ಸಾವು
ಸಾಧು ಶ್ರೀನಾಥ್​

Updated on: May 27, 2020 | 6:55 PM

ಗದಗ: ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತವಾಗಿ ಕೊವಿಡ್ ವಾರಿಯರ್ ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಉಮೇಶ್(37) ಮೃತಪಟ್ಟವರು.

ಕೊಣ್ಣೂರ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಚಾಲಕ ಉಮೇಶ್​ನನ್ನು ಧಾರವಾಡ ಎಸ್​ಡಿಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ದಾರಿ ಮಧ್ಯೆಯೇ ಉಮೇಶ್ ಮೃತಪಟ್ಟಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಉಮೇಶ್ ಮೃತಪಟ್ಟಿದ್ದರೂ ಡಿಹೆಚ್ಒ ಡಾ.ಸತೀಶ್ ಬಸರಿಗಿಡದ ಅವರಿಗೆ ಗೊತ್ತಿಲ್ಲವಂತೆ!  ಈ ಬಗ್ಗೆ ವಿಚಾರಿಸಿದ್ರೆ.. ಅದು ನನ್ನ ವ್ಯಾಪ್ತಿಗೆ ಬರಲ್ಲ ಎಂದು ಉಡಾಫೆ ಉತ್ತರವನ್ನೂ ನೀಡಿದ್ದಾರೆ.

Published On - 6:49 pm, Wed, 27 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us